ADVERTISEMENT

ಡಿ.ಕೆ.ಶಿವಕುಮಾರ್‌ ಯುದ್ಧ ಗೆದ್ದು ಬಂದಿಲ್ಲ: ಸಚಿವ ಆರ್‌. ಅಶೋಕ

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2019, 11:06 IST
Last Updated 26 ಅಕ್ಟೋಬರ್ 2019, 11:06 IST
   

ಹುಬ್ಬಳ್ಳಿ: ಮಾಜಿ ಸಚಿವ ಹಾಗೂ ಶಾಸಕ ಡಿ.ಕೆ.ಶಿವಕುಮಾರ ಅವರಿಗೆ ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ ನೀಡಿರುವುದು ಸರಿ ಅಲ್ಲ, ಅವರೇನೂ ಯುದ್ಧ ಗೆದ್ದು ಬಂದಿಲ್ಲ ಎಂದುಕಂದಾಯ ಸಚಿವ ಆರ್. ಅಶೋಕ ಹೇಳಿದ್ದಾರೆ.

ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರುಡಿ.ಕೆ.ಶಿವಕುಮಾರ್‌ ಅವರ ವಿರುದ್ಧದ ಪ್ರಕರಣ ಇನ್ನು ನ್ಯಾಯಾಲಯದಲ್ಲಿ ಇರುವಾಗ ಈ ರೀತಿಯ ವರ್ತನೆ ಸರಿ ಅಲ್ಲ ಎಂದು ಹೇಳಿದರು.

ಅನರ್ಹಗೊಂಡ ಶಾಸಕರಿಗೆ ಉಪ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನೀಡುವ ಬಗ್ಗೆ ಇನ್ನು ಯಾವುದೇ ನಿರ್ಧಾರ ಆಗಿಲ್ಲ, ಆದರೆ, ರಾಜ್ಯದಲ್ಲಿ ಯಾರಿಂದಾಗಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ ಎಂಬುದು ಪಕ್ಷದ ಕಾರ್ಯಕರ್ತರಿಗೆ ತಿಳಿದಿದೆ. ಅನರ್ಹಗೊಂಡ ಶಾಸಕರ ಬಗ್ಗೆ ಸುಪ್ರಿಂ ಕೋರ್ಟ್ ಅಂತಿಮ ತೀರ್ಪು ನೀಡಿದ ಬಳಿಕ ಅನರ್ಹರಿಗೆ ಅಥವಾ ಪಕ್ಷದವರಿಗೆ ಟಿಕೆಟ್ ನೀಡಬೇಕೆ ಎಂಬುದನ್ನು ನಿರ್ಧರಿಸಲಾಗುವುದು.

ADVERTISEMENT

ನೆರೆ ಸಂತ್ರಸ್ತರಿಗೆ ಈಗಾಗಲೇ ಪರಿಹಾರ ನೀಡಲಾಗುತ್ತಿದೆ. ಮನೆ ಬಿದ್ದವರಿಗೆ ₹5 ಲಕ್ಷ ಹಾಗೂ 30/40 ನಿವೇಶನ ಉಚಿತವಾಗಿ ನೀಡಲಾಗುತ್ತದೆ. ಅನಧಿಕೃತವಾಗಿ ಕಟ್ಟಿಕೊಂಡಿದ್ದ ಮನೆಗಳು ಕುಸಿದಿದ್ದರೂ ಪರಿಹಾರ ಕೊಡಲಾಗುವುದು. ಜತೆಗೆ, ಸುರಕ್ಷಿತ ಸ್ಥಳದಲ್ಲಿ ನಿವೇಶನ ನೀಡಲಾಗುವುದು. ಪರಿಹಾರ ನೀಡಲು ಹಣದ ಕೊರತೆ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.