ADVERTISEMENT

ಮಾಡೋದೆಲ್ಲ ಅನಾಚಾರ, ಮನೆ ಮುಂದೆ ಬೃಂದಾವನ: ಕಾಂಗ್ರೆಸ್ ವಿರುದ್ಧ ಬಿಜೆಪಿ ಗರಂ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ಡಿಸೆಂಬರ್ 2022, 7:41 IST
Last Updated 4 ಡಿಸೆಂಬರ್ 2022, 7:41 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜಕೀಯ ನಾಯಕರು ರೌಡಿ ಶೀಟರ್‌ಗಳೊಂದಿಗೆ ಕಾಣಿಸಿಕೊಂಡಿರುವ ವಿಚಾರ ಕಾಂಗ್ರೆಸ್‌ –ಬಿಜೆಪಿ ನಡುವೆ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ.

ಕಾಂಗ್ರೆಸ್ ನಾಯಕರು ರೌಡಿ ಶೀಟರ್‌ಗಳೊಂದಿಗೆ ಕಾಣಿಸಿಕೊಂಡಿರುವ ವಿಚಾರವನ್ನು ಪ್ರಸ್ತಾಪಿಸಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಪಕ್ಷದ ತುಂಬಾ ಗೂಂಡಾಗಳನ್ನು ತುಂಬಿಸಿಕೊಂಡಿರುವ ಕಾಂಗ್ರೆಸ್‌ಗೆ ಬಿಜೆಪಿಯ ನೈತಿಕತೆ ಬಗ್ಗೆ ಮಾತಾಡುವ ಹಕ್ಕಿಲ್ಲ’ ಎಂದು ಕಿಡಿಕಾರಿದೆ.

‘ಕಾಂಗ್ರೆಸ್‌ನ ಮುನ್ನೆಲೆಯ ನಾಯಕರೇ ಕ್ರಿಮಿನಲ್‌ ಹಿನ್ನೆಲೆ ಹೊಂದಿದ್ದು, ಮಾಡೋದೆಲ್ಲ ಅನಾಚಾರ, ಮನೆ ಮುಂದೆ ಬೃಂದಾವನ ಎನ್ನುವಂತಾಗಿದ’ ಎಂದು ಬಿಜೆಪಿ ವ್ಯಂಗ್ಯವಾಡಿದೆ.

ADVERTISEMENT

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.