ADVERTISEMENT

ಅಸಂಘಟಿತ ಕಾರ್ಮಿಕರಿಗೆ ನಯಾ ಪೈಸೆ ಸಿಕ್ಕಿಲ್ಲ: ಡಿಕೆಶಿ ಆರೋಪ

​ಪ್ರಜಾವಾಣಿ ವಾರ್ತೆ
Published 26 ಮೇ 2020, 6:51 IST
Last Updated 26 ಮೇ 2020, 6:51 IST
ಡಿ.ಕೆ‌.ಶಿವಕುಮಾರ್
ಡಿ.ಕೆ‌.ಶಿವಕುಮಾರ್   

ಬೆಂಗಳೂರು: ಕೊರೊನಾ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿದ ಕೆಲವು ಅಸಂಘಟಿತ ಕಾರ್ಮಿಕರಿಗೆ ಸರ್ಕಾರ ಘೋಷಿಸಿದ ಪ್ಯಾಕೇಜ್ ಕೇವಲ ಘೋಷಣೆಯಾಗಿಯೇ ಇದೆ. ಯಾರೊಬ್ಬರಿಗೂ ನಯಾ ಪೈಸೆ ಸಿಕ್ಕಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ‌.ಶಿವಕುಮಾರ್ ಆರೋಪಿಸಿದರು.

'ಅನಗತ್ಯ ಷರತ್ತುಗಳನ್ನು ವಿಧಿಸಿ ಬಡ ಟ್ಯಾಕ್ಸಿ, ಆಟೊ ಚಾಲಕರಿಗೆ ವಂಚಿಸಲಾಗುತ್ತಿದೆ. ಮಧ್ಯವರ್ತಿಗಳಿಗೆ ಕಮಿಷನ್ ಪಡೆಯುವುದಕ್ಕೆ ಅವಕಾಶ ನೀಡಲಾಗಿದೆ. ಇದರ ಹೊರತಾಗಿ ಚಾಲಕರನ್ನು ಗುರುತಿಸಿ ಪರಿಹಾರ ನೀಡುವುದು ಅಧಿಕಾರಿಗಳಿಗೆ ಕಷ್ಟ ಏನಿದೆ' ಎಂದು ಅವರು ಮಂಗಳವಾರ ಇಲ್ಲಿ ಮಾಧ್ಯಮದರಿಗೆ ತಿಳಿಸಿದರು.

ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರು ಸೋಮವಾರ ವಿಮಾನ ನಿಲ್ದಾಣದಲ್ಲಿ ಕನಿಷ್ಠ ಪಕ್ಷ ಪರೀಕ್ಷೆಗಾದರೂ ಒಳಪಟ್ಟು ಬೆಂಗಳೂರು ನಗರಕ್ಕೆ ಬರಬೇಕಿತ್ತು ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.