ADVERTISEMENT

ಹಾರೋಹಳ್ಳಿ: ಹೆಗಲ ಮೇಲೆ ಡಿಕೆಶಿ ಮೆರವಣಿಗೆ

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2019, 10:39 IST
Last Updated 28 ಅಕ್ಟೋಬರ್ 2019, 10:39 IST
ಕನಕಪುರಕ್ಕೆ ಸೋಮವಾರ ಮಧ್ಯಾಹ್ನ ಆಗಮಿಸಿದ ಶಾಸಕ‌ ಡಿ.ಕೆ. ಶಿವಕುಮಾರ್ ಅವರನ್ನು ಸ್ಥಳೀಯರು ಮೆರವಣಿಗೆ ನಡೆಸಿ‌ ಸ್ವಾಗತಿಸಿದರು.
ಕನಕಪುರಕ್ಕೆ ಸೋಮವಾರ ಮಧ್ಯಾಹ್ನ ಆಗಮಿಸಿದ ಶಾಸಕ‌ ಡಿ.ಕೆ. ಶಿವಕುಮಾರ್ ಅವರನ್ನು ಸ್ಥಳೀಯರು ಮೆರವಣಿಗೆ ನಡೆಸಿ‌ ಸ್ವಾಗತಿಸಿದರು.   

ರಾಮನಗರ: ಸೋಮವಾರ ಕನಕಪುರ ತಾಲ್ಲೂಕಿನ ಹಾರೋಹಳ್ಳಿಗೆ ಆಗಮಿಸಿದ ಶಾಸಕ ಡಿ.ಕೆ. ಶಿವಕುಮಾರ್ ಅವರನ್ನು ಕಾಂಗ್ರೆಸ್ ಕಾರ್ಯಕರ್ತರು ಹೆಗಲ ಮೇಲೆ ಹೊತ್ತು ಮೆರವಣಿಗೆ ಮಾಡಿದರು.

ಪಟ್ಟಣದ ಚಾಮುಂಡೇಶ್ವರಿ ದೇಗುಲದಲ್ಲಿ ಪೂಜೆ ಸಲ್ಲಿಸಿದ ಶಿವಕುಮಾರ್ ಕಾರ್ಯಕರ್ತರಿಗೆ ಧನ್ಯವಾದ ಹೇಳಿ ಕನಕಪುರಕ್ಕೆ ತೆರಳಿದರು.

ಡಿಕೆಶಿ ಸಂಜೆ ತಮ್ಮ ಸ್ವಗ್ರಾಮ ದೊಡ್ಡಾಲಹಳ್ಳಿಯಲ್ಲಿ ಇರುವ ಪೂರ್ವಿಕರ ಸಮಾಧಿ ಸ್ಥಳಕ್ಕೆ ತೆರಳಿ ಪೂಜೆ ಸಲ್ಲಿಸಲಿದ್ದಾರೆ. ಕಳೆದ ಮಹಾಲಯ ಅಮಾವಾಸ್ಯೆ ಸಂದರ್ಭ ಅವರು ದೆಹಲಿಯಲ್ಲಿ ಇ.ಡಿ. ವಿಚಾರಣೆ ಎದುರಿಸುತ್ತಿದ್ದ ಕಾರಣ ಪೂಜೆ ಸಲ್ಲಿಸಲು ಆಗಿರಲಿಲ್ಲ. ಇದೇ ಕಾರಣಕ್ಕೆ ಡಿಕೆಶಿ ಕಣ್ಣೀರು ಹಾಕಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.