ರಾಮನಗರ: ಕನಕಪುರ ತಾಲ್ಲೂಕಿನ ಸಾತನೂರು ಹೋಬಳಿಯ ದೊಡ್ಡ ಆಲಹಳ್ಳಿಯಲ್ಲಿ ಶಾಸಕ ಡಿ.ಕೆ. ಶಿವಕುಮಾರ್ ತಮ್ಮ ತಂದೆ ಕೆಂಪೇಗೌಡರ ಸಮಾಧಿಗೆ ಸೋಮವಾರ ಪೂಜೆ ಸಲ್ಲಿಸಿದರು.
ಇದಕ್ಕೂ ಮುನ್ನ ಗ್ರಾಮಸ್ಥರು ಪೂರ್ಣಕುಂಭ ಮೆರವಣಿಗೆ ಮೂಲಕ ಡಿಕೆಶಿಯನ್ನು ಅದ್ದೂರಿಯಾಗಿ ಸ್ವಾಗತಿಸಿದರು. ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ಪತ್ನಿ ಉಷಾ, ತಾಯಿ ಗೌರಮ್ಮ, ಸಂಸದ ಹಾಗೂ ಸಹೋದರ ಡಿ.ಕೆ. ಸುರೇಶ್, ಮಕ್ಕಳಾದ ಐಶ್ವರ್ಯ, ಆಕಾಶ್ ಇದ್ದರು.
ಇದಕ್ಕೂ ಮುನ್ನ ಶಿವಕುಮಾರ್ ತಮ್ಮ ಕನಕಪುರದಲ್ಲಿನ ತಮ್ಮ ಮನೆ ದೇವರಾದ ಕೆಂಕೇರಮ್ಮ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಿದರು. ನಂತರ ಮರಳೇಗವಿ ಮಠಕ್ಕೆ ಭೇಟಿ ನೀಡಿದರು. ಪ್ರತಿ ಹಳ್ಳಿಯಲ್ಲೂ ಗ್ರಾಮಸ್ಥರು ಆರತಿ ಎತ್ತಿ ಡಿಕೆಎಸ್ ಸಹೋದರರನ್ನು ಸ್ವಾಗತಿಸಿದರು.
ಇದನ್ನೂ ಓದಿ...ಹಾರೋಹಳ್ಳಿ: ಹೆಗಲ ಮೇಲೆ ಡಿಕೆಶಿ ಮೆರವಣಿಗೆ
ಇನ್ನಷ್ಟು...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.