ADVERTISEMENT

ಕುತೂಹಲ ಮೂಡಿಸಿದ ಡಿ.ಕೆ ಸುರೇಶ್‌ – ಯೋಗೇಶ್ವರ್‌ ಆಪ್ತ ಮಾತು!

​ಪ್ರಜಾವಾಣಿ ವಾರ್ತೆ
Published 6 ಜನವರಿ 2023, 6:36 IST
Last Updated 6 ಜನವರಿ 2023, 6:36 IST
   

ರಾಮನಗರ: ಹೆದ್ದಾರಿಯಲ್ಲಿ ಕೇಂದ್ರ ಸಚಿವರನ್ನು ಬರಮಾಡಿಕೊಳ್ಳಲು ಬಂದಿದ್ದ ಸಂಸದ ಡಿ.ಕೆ. ಸುರೇಶ್‌ ಹಾಗೂ ವಿಧಾನ ಪರಿಷತ್‌ ಸದಸ್ಯ ಸಿ.ಪಿ. ಯೋಗೇಶ್ವರ್‌ ನಡುವಿನ ಆಪ್ತ ಮಾತುಕತೆ ಕುತೂಹಲ ಮೂಡಿಸಿತ್ತು.

ಇಬ್ಬರೂ ಪಕ್ಕದಲ್ಲೇ ನಿಂತು ನಗುತ್ತಲೇ ಹರಟೆ ಹೊಡೆದರು. ‘ಕಳೆದ ಬಾರಿ ಬ್ರದರ್‌– ಸಿಸ್ಟರ್ ಎಂದು ಹೋಗಿದ್ದೀರಿ? ಏನಾಯಿತು ದೋಸ್ತಿ?’ ಎಂದು ಸಿಪಿವೈ ನಗುತ್ತಲೇ ಕಾಲೆಳೆದರು. ಈ ಸಂದರ್ಭ ಮಾತನಾಡಿದ ಇಬ್ಬರೂ ‘ ನಾವಿಬ್ಬರೂ ಮೂವತ್ತು ವರ್ಷದ ಸ್ನೇಹಿತರು. ರಾಜಕಾರಣ ಬೇರೆ. ಇಂದಿನದ್ದು ಬರೀ ವಿಶ್ವಾಸದ ಮಾತುಕತೆ ಅಷ್ಟೇ’ ಎಂದು ಸಮಜಾಯಿಷಿಯನ್ನೂ ನೀಡಿದರು.

ಚನ್ನಪಟ್ಟಣದಲ್ಲಿ ಈ ಬಾರಿ ಬಿಜೆಪಿಯಿಂದ ಯೋಗೇಶ್ವರ್‌ ಹಾಗೂ ಜೆಡಿಎಸ್‌ನಿಂದ ಎಚ್‌.ಡಿ. ಕುಮಾರಸ್ವಾಮಿ ಸ್ಪರ್ಧೆ ಖಚಿತವಾಗಿದೆ. ಕಾಂಗ್ರೆಸ್‌ ಮಾತ್ರ ಇನ್ನೂ ಅಭ್ಯರ್ಥಿ ಹಾಕಿಲ್ಲ. ಈ ನಡುವೆಯೇ ಈ ಇಬ್ಬರ ಸಾಮೀಪ್ಯ ಹಲವು ಕುತೂಹಲಗಳಿಗೆ ಕಾರಣವಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.