ADVERTISEMENT

ಕೋಮು ಗಲಭೆ ನಡೆಸಲು ಬಿಜೆಪಿ ತಯಾರಿ: ಡಿ.ಕೆ.ಸುರೇಶ್‌

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2023, 21:40 IST
Last Updated 5 ಫೆಬ್ರುವರಿ 2023, 21:40 IST
   

ಬೆಂಗಳೂರು: ‘ಕರಾವಳಿ ಸೇರಿ ರಾಜ್ಯದ ವಿವಿಧೆಡೆ ಕೋಮು ಗಲಭೆ ನಡೆಸಲು ಬಿಜೆಪಿ ತಯಾರಿ
ನಡೆಸುತ್ತಿದೆ’ ಎಂದು ಕಾಂಗ್ರೆಸ್‌ ಸಂಸದ ಡಿ.ಕೆ.ಸುರೇಶ್‌ ಆರೋಪಿಸಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಚುನಾವಣೆ ಗೆಲ್ಲಲು ಬಿಜೆಪಿಯವರು ಏನು ಬೇಕಾದರೂ ಮಾಡುತ್ತಾರೆ’ ಎಂದರು.

‘ನಮ್ಮ ಸರ್ವೆ ಬಗ್ಗೆ ಬಿಜೆಪಿ ನಾಯಕ ಸಿ.ಟಿ.ರವಿ ವ್ಯಂಗ್ಯ ಮಾಡಿದ್ದಾರೆ. ರಾಜ್ಯದಲ್ಲಿ ಅಶಾಂತಿ ಸೃಷ್ಟಿಸಲು ಸಿ.ಟಿ. ರವಿ ಪಾಕ್ ವಿಚಾರ ಪ್ರಸ್ತಾಪಿಸಿದ್ದಾರೆ. ಬಿಜೆಪಿಯವರು ನೀಚರು’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.