ಬೆಂಗಳೂರು: 'ಬಸವಣ್ಣನವರ ನಾಡಿನಲ್ಲಿ ಹುಟ್ಟಿರುವುದು ನಮ್ಮೆಲ್ಲರ ಭಾಗ್ಯ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
ನಗರದ ಬಸವ ಭವನದಲ್ಲಿ ಭಾನುವಾರ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
'ಬಸವಣ್ಣನವರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ನಡೆಯುತ್ತಾ, ಅವರ ನೀತಿ, ವಚನಗಳನ್ನು ನಾವು ಉಸಿರಾಡುತ್ತಿದ್ದೇವೆ' ಎಂದರು.
'12 ನೇ ಶತಮಾನದಲ್ಲಿ ಅನುಭವ ಮಂಟಪವನ್ನು ಸ್ಥಾಪಿಸಿ, ಪ್ರಜಾಪ್ರಭುತ್ವದಲ್ಲಿ ಸಂಸತ್ತಿನ ಪರಿಕಲ್ಪನೆಗೆ ಅಡಿಪಾಯ ಹಾಕಿಕೊಟ್ಟವರು ಬಸವಣ್ಣನವರು. ಅದೇ ಸಂಸತ್ ವ್ಯವಸ್ಥೆಯಲ್ಲಿ ನಾವೀಗ ಕೆಲಸ ಮಾಡುತ್ತಾ ಪ್ರಜಾಪ್ರಭುತ್ವವನ್ನು ಮುಂದುವರಿಸಿಕೊಂಡು ಹೋಗುತ್ತಿದ್ದೇವೆ' ಎಂದರು.
'ಬಸವಣ್ಣನವರ ಚಿಂತನೆ, ಕಾಂಗ್ರೆಸ್ ಚಿಂತನೆ. ಬಸವಣ್ಣನವರ ಪ್ರತಿ ಆದರ್ಶಗಳನ್ನು ಕಾಂಗ್ರೆಸ್ ಪಾಲನೆ ಮಾಡಿಕೊಂಡು ಬರುತ್ತಿದೆ. ಅದನ್ನು ಮುಂದುವರಿಸಿಕೊಂಡು ಹೋಗುತ್ತೇವೆ. ನಾವು ನುಡಿದಂತೆ ನಡೆಯುತ್ತೇವೆ' ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.