ಕೆ.ಎನ್ ರಾಜಣ್ಣ
– ಪ್ರಜಾವಾಣಿ ಚಿತ್ರ
ತುಮಕೂರು: ಈದ್ಗಾ ಮೈದಾನ, ರಸ್ತೆಯಲ್ಲಿ ನಮಾಜ್ ಮಾಡಲು ಮುಸ್ಲಿಮರು ಅನುಮತಿ ಪಡೆದುಕೊಳ್ಳುತ್ತಾರೆಯೇ? ಇದನ್ನು ತಡೆಯಲು ಸಾಧ್ಯವಿದೆಯೇ? ಎಂದು ಶಾಸಕ ಕೆ.ಎನ್.ರಾಜಣ್ಣ ಇಲ್ಲಿ ಶನಿವಾರ ಪ್ರಶ್ನಿಸಿದರು.
ಅನುಮತಿ ಇಲ್ಲದೆ ರಸ್ತೆಯಲ್ಲಿ ನಮಾಜ್ ಮಾಡಿದರೆ ತಡೆಯುವ ಶಕ್ತಿ ಇದೆಯೇ? ಅನುಮತಿ ಕೊಡಿ ಎಂದು ಅವರು ಬರುತ್ತಾರೆಯೇ? ಅನುಮತಿ ತೆಗೆದುಕೊಳ್ಳಿ ಎಂದು ನಾವು ಹೇಳುತ್ತೇವೆಯೆ? ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಯಕ್ರಮ ಆಯೋಜಿಸಲು ಅನುಮತಿ ಪಡೆದುಕೊಳ್ಳುವುದು ಕಡ್ಡಾಯ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಜಾರಿ ಮಾಡಲು ಸಾಧ್ಯವಾಗುವ ಕಾನೂನು ಜಾರಿಗೆ ತರಬೇಕು. ಜಾರಿ ಮಾಡಲಾಗದ ಕಾನೂನು ಜಾರಿಗೆ ತಂದರೆ, ಅದು ಪುಸ್ತಕದಲ್ಲಿ ಇರುತ್ತದೆ. ಹೊಸ ನಿಯಮ ಎಷ್ಟರ ಮಟ್ಟಿಗೆ ಜಾರಿಗೆ ಬರುತ್ತದೆ ಎಂಬುದನ್ನು ಕಾದು ನೋಡಬೇಕಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.