ADVERTISEMENT

ಮಕ್ಕಳ ಕೈಗೆ ಮೊಬೈಲ್‌ ಕೊಡಬೇಡಿ: ನಟ ದೊಡ್ಡಣ್ಣ

​ಪ್ರಜಾವಾಣಿ ವಾರ್ತೆ
Published 4 ಜನವರಿ 2024, 14:19 IST
Last Updated 4 ಜನವರಿ 2024, 14:19 IST
ನಟ ದೊಡ್ಡಣ್ಣ
ನಟ ದೊಡ್ಡಣ್ಣ   

ನವದೆಹಲಿ: ‘ಮಕ್ಕಳಿಗೆ ಕನ್ನಡ ಭಾಷೆಯನ್ನು ಹೇಳಿಕೊಡುವ ಮೂಲಕ ನಮ್ಮ ನಾಡಿನ ನೆಲಮೂಲದ ಸಂಸ್ಕಾರ ಕಲಿಸಬೇಕು’ ಎಂದು ನಟ ದೊಡ್ಡಣ್ಣ ಸಲಹೆ ನೀಡಿದರು. 

ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ದೆಹಲಿ ಘಟಕದ ಆಶ್ರಯದಲ್ಲಿ ನಡೆದ ಮೂರನೇ ವಾರ್ಷಿಕೋತ್ಸವ ಹಾಗೂ ವಿಶ್ವಮಾನವ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. 

‘ಮಕ್ಕಳ ಕೈಗೆ ಮೊಬೈಲ್ ಕೊಡಬೇಡಿ. ಇದರಿಂದ ಅವರ ಬುದ್ಧಿಶಕ್ತಿ ಬೆಳವಣಿಗೆ ಕುಂಠಿತಗೊಳ್ಳಲಿದೆ’ ಎಂದರು. 

ADVERTISEMENT

ಅಧ್ಯಕ್ಷತೆ ವಹಿಸಿದ್ದ ನಿರ್ದೇಶಕ ಟಿ. ಎಸ್.ನಾಗಾಭರಣ, ‘ವಿಶ್ವಮಾನವ ತತ್ವಗಳು ಕನ್ನಡ ಸಂಸ್ಕೃತಿ ಬೇರುಗಳಲ್ಲಿಯೇ ಇದೆ. ಎಲ್ಲ ಕಾಲದಲ್ಲೂ ಈ ಪರಂಪರೆಯನ್ನು ಕನ್ನಡದಲ್ಲಿ ಪೋಷಿಸಿಕೊಂಡು ಬರಲಾಗುತ್ತಿದೆ’ ಎಂದರು.

ಪರಿಷತ್ತಿನ ಅಧ್ಯಕ್ಷ ಚಂದ್ರಶೇಖರ್ ಎನ್‌.ಪಿ., ವಿದ್ವಾಂಸ ಪ್ರೊ.ಶ್ರೀನಿವಾಸ ವರಖೇಡಿ, ಅನಂತರಾಮ ಅರಳಿ ಮತ್ತಿತರರು ಇದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.