ADVERTISEMENT

ಸರ್ಕಾರ ಮತ್ತು ಪಕ್ಷಕ್ಕೆ ಮುಜುಗರ ಆಗುವಂತ ಹೇಳಿಕೆ ನೀಡಬೇಡಿ: ನಳಿನ್‌ ಕುಮಾರ್‌

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2022, 21:41 IST
Last Updated 17 ಆಗಸ್ಟ್ 2022, 21:41 IST
ನಳಿನ್‌ ಕುಮಾರ್‌ ಕಟೀಲ್‌
ನಳಿನ್‌ ಕುಮಾರ್‌ ಕಟೀಲ್‌   

ಬೆಂಗಳೂರು: ಸರ್ಕಾರ ಮತ್ತು ಪಕ್ಷಕ್ಕೆ ಮುಜುಗರ ಆಗುವಂತ ಹೇಳಿಕೆಗಳನ್ನು ನೀಡಬಾರದು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರು ಸಚಿವರು ಮತ್ತು ಶಾಸಕರಿಗೆ ಸೂಚನೆ ನೀಡಿದ್ದಾರೆ.

ಈ ಸಂಬಂಧ ಸಚಿವರಾದ ಜೆ.ಸಿ.ಮಾಧುಸ್ವಾಮಿ, ಬಿ.ಶ್ರೀರಾಮುಲು ಮತ್ತು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರ ಜತೆ ನಳಿನ್‌ ಕುಮಾರ್‌ ಬುಧವಾರ ಮಾತುಕತೆ ನಡೆಸಿದರು.

ಸರ್ಕಾರದ ಕಾರ್ಯವೈಖರಿ ಅಥವಾ ಪಕ್ಷದ ಸಂಘಟನೆಗೆ ಸಂಬಂಧಿಸಿದ ಯಾವುದಾದರು ಸಲಹೆ –ಸೂಚನೆಗಳು ಇದ್ದರೆ ಅದನ್ನು ಪಕ್ಷದ ವೇದಿಕೆಯಲ್ಲಿ ಅಥವಾ ಸಚಿವ ಸಂಪುಟ ಸಭೆಯಲ್ಲಿ ತಿಳಿಸಬೇಕು. ಬಹಿರಂಗವಾಗಿ ಹೇಳಿಕೆ ನೀಡಿ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸ ಬಾರದು ಎಂದು ಸೂಚಿಸಿದ್ದಾಗಿ ಮೂಲಗಳು ತಿಳಿಸಿವೆ.

ADVERTISEMENT

‘ಇತ್ತೀಚೆಗೆ ಮಾಧುಸ್ವಾಮಿ ಅವರು ಸರ್ಕಾರ ನಡೆಯುತ್ತಿಲ್ಲ, ಮ್ಯಾನೇಜ್ ಮಾಡುತ್ತಿದ್ದೇವೆ’ ಎಂದು ಹೇಳಿದ್ದು, ‘ಸಿದ್ದರಾಮಯ್ಯ ಮತ್ತೊಮ್ಮೆ ಮುಖ್ಯಮಂತ್ರಿ ಆಗಲಿ ಎಂದು ಬಯಸುತ್ತೇನೆ’ ಎಂದು ಶ್ರೀರಾಮುಲು ಹೇಳಿಕೆ ನೀಡಿರುವುದು ಪಕ್ಷವನ್ನು ಮುಜುಗರಕ್ಕೆ ಸಿಲುಕಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.