ADVERTISEMENT

ಕೆಎಎಸ್‌ ಅಧಿಕಾರಿಗಳ ಸಂಘಕ್ಕೆ ಡಾ. ರವಿ ಅಧ್ಯಕ್ಷ

​ಪ್ರಜಾವಾಣಿ ವಾರ್ತೆ
Published 29 ಮೇ 2022, 19:31 IST
Last Updated 29 ಮೇ 2022, 19:31 IST
ಡಾ. ರವಿ ಎಂ. ತಿರ್ಲಾಪುರ
ಡಾ. ರವಿ ಎಂ. ತಿರ್ಲಾಪುರ   

ಬೆಂಗಳೂರು: ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘಕ್ಕೆ ಸರ್ವಾನುಮತದಿಂದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.

ಭಾನುವಾರ ನಗರದಲ್ಲಿ ನಡೆದ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಈ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರ ಆಪ್ತ ಕಾರ್ಯದರ್ಶಿ ಡಾ. ರವಿ ಎಂ. ತಿರ್ಲಾಪುರ (ಅಧ್ಯಕ್ಷ), ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆಗಳ
ಸಚಿವರ ಆಪ್ತ ಕಾರ್ಯದರ್ಶಿ ಎಂ.ಕೆ. ಜಗದೀಶ್‌ (ಉಪಾಧ್ಯಕ್ಷ), ಬಿಡಿಎ ವಿಶೇಷ ಭೂಸ್ವಾಧೀನ ಅಧಿಕಾರಿ ಡಾ.ಬಿ.ಆರ್‌. ಹರೀಶ್‌ ನಾಯ್ಕ್‌ (ಕಾರ್ಯದರ್ಶಿ), ಶಿವಮೊಗ್ಗ ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ನಾಗೇಂದ್ರ ಎಫ್‌. ಹೊನ್ನಾಳಿ (ಜಂಟಿ ಕಾರ್ಯದರ್ಶಿ), ಧಾರವಾಡ ತಹಶೀಲ್ದಾರ್‌ ಡಾ. ಸಂತೋಷ್‌ ಬಿರಾದಾರ್‌ (ಖಜಾಂಚಿ) ಅವರನ್ನು ಆಯ್ಕೆ
ಮಾಡಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.