ADVERTISEMENT

Lokayukta Raid | ದಾಖಲೆಗಳು ವಶಕ್ಕೆ: ಲೋಕಾಯುಕ್ತ ಎಸ್‌ಪಿ ಉಮೇಶ್

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2023, 5:34 IST
Last Updated 10 ಫೆಬ್ರುವರಿ 2023, 5:34 IST
   

ಕೋಲಾರ: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ಕೋಲಾರ ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್) ಜಿ.ವೆಂಕಟೇಶ್‌ ಅವರು ವಾಸವಿರುವ ಕ್ವಾರ್ಟರ್ಸ್ ಮೇಲೆ ಶುಕ್ರವಾರ ಬೆಳಿಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಶೋಧ ನಡೆಸುತ್ತಿದ್ದಾರೆ.

ಈ ಸಂದರ್ಭದಲ್ಲಿ ವೆಂಕಟೇಶ್ ಇರಲಿಲ್ಲ. ಕ್ವಾರ್ಟರ್ಸ್ ನಲ್ಲಿ ಹಣ ಸಿಕ್ಕಿರುವುದು ಗೊತ್ತಾಗಿದೆ‌

'ಕ್ಲಾಕ್ ಟವರ್ ಬಳಿ ಇರುವ ಅರಣ್ಯ ಇಲಾಖೆ ಕ್ವಾರ್ಟರ್ಸ್ ಹಾಗೂ ಹಳೆ ಜಿಲ್ಲಾಧಿಕಾರಿ ಕಚೇರಿ ಬಳಿ ಇರುವ ಕಚೇರಿ ಶೋಧಿಸಿ ಮಹಜರ್ ಮಾಡಿದ್ದೇವೆ. ಕೆಲ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದೇವೆ' ಎಂದು ಲೋಕಾಯುಕ್ತ ಎಸ್‌ಪಿ ಉಮೇಶ್ 'ಪ್ರಜಾವಾಣಿ'ಗೆ ತಿಳಿಸಿದರು

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.