ADVERTISEMENT

ಕಠಿಣ ಕ್ರಮಕ್ಕೆ ಅವಕಾಶ ಕೊಡಬೇಡಿ: ಸಾರಿಗೆ ನೌಕರರಲ್ಲಿ ಸಿಎಂ ಮನವಿ

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2021, 12:42 IST
Last Updated 6 ಏಪ್ರಿಲ್ 2021, 12:42 IST
ಯಡಿಯೂರಪ್ಪ
ಯಡಿಯೂರಪ್ಪ   

ಹುಬ್ಬಳ್ಳಿ: ಸಾರಿಗೆ ನೌಕರರು ದಯವಿಟ್ಟು ಮುಷ್ಕರ ಕೈಬಿಟ್ಟು ಸರ್ಕಾರದೊಂದಿಗೆ ಸಹಕರಿಸಬೇಕು. ಒಂಬತ್ತು ಬೇಡಿಕೆಗಳ ಪೈಕಿ, ಈಗಾಗಲೇ ಎಂಟು ಬೇಡಿಕೆಗಳನ್ನು ಈಡೇರಿಸಲಾಗಿದೆ. ಹಾಗಾಗಿ, ಕಠಿಣ ಕ್ರಮಕ್ಕೆ ಅವಕಾಶ ಕೊಡಬಾರದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಹುಬ್ಬಳ್ಳಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೌಕರರು ಮುಷ್ಕರ ಮುಂದುವರಿಸಿದರೆ ಖಾಸಗಿ ವಾಹನಗಳು ಮತ್ತು ರೈಲುಗಳ ಸಂಚಾರ ಹೆಚ್ಚಿಸಿ, ಪರ್ಯಾಯ ವ್ಯವಸ್ಥೆ ಮಾಡಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT