ADVERTISEMENT

ಕೋವಿಡ್‌ ನಿಯಂತ್ರಣದಲ್ಲಿ ರಾಜಕೀಯ ಬೇಡ: ಸಚಿವ ಸುರೇಶ ಅಂಗಡಿ

​ಪ್ರಜಾವಾಣಿ ವಾರ್ತೆ
Published 10 ಜುಲೈ 2020, 22:10 IST
Last Updated 10 ಜುಲೈ 2020, 22:10 IST
ಸಚಿವ ಸುರೇಶ್ ಅಂಗಡಿ
ಸಚಿವ ಸುರೇಶ್ ಅಂಗಡಿ   

ಬೆಳಗಾವಿ: ‘ಕೋವಿಡ್‌–19 ನಿಯಂತ್ರಿಸಲು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಅವರನ್ನು ಟೀಕಿಸಿ, ರಾಜಕೀಯಗೊಳಿಸಬಾರದು’ ಎಂದು ರೈಲ್ವೆ ರಾಜ್ಯ ಸಚಿವ ಸುರೇಶ ಅಂಗಡಿ ಅವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಕೋರಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ನೆರೆಯ ಮಹಾರಾಷ್ಟ್ರದಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ದೇವೇಂದ್ರ ಫಡ್ನವೀಸ್‌ ಅವರು ಅಲ್ಲಿನ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಪ್ರಶಂಸಿರುವಂತೆ ಸಿದ್ದರಾಮಯ್ಯ ಅವರೂ ಸರ್ಕಾರವನ್ನು ಬೆಂಬಲಿಸಲಿ’ ಎಂದು ಮನವಿ ಮಾಡಿದರು.

‘ಕೋವಿಡ್‌–19 ನಿಯಂತ್ರಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಕ್ರಮಗಳನ್ನು ವಿವಿಧ ರಾಷ್ಟ್ರಗಳು ಮೆಚ್ಚಿವೆ. ಆದರೆ ಸ್ಥಳೀಯ ಕೆಲ ನಾಯಕರು ವಿರೋಧ ವ್ಯಕ್ತಪಡಿಸು ತ್ತಿರುವುದು ದುರ್ದೈವ’ ಎಂದು ವಿಷಾದ ವ್ಯಕ್ತಪಡಿಸಿದರು.

ADVERTISEMENT

‘ದೇಶದ 80 ಕೋಟಿ ಜನರಿಗೆ ಅಕ್ಕಿ, ಬೇಳೆ ನೀಡುವ ನಿರ್ಧಾರವನ್ನು ಮೋದಿಯವರು ಕೈಗೊಂಡಿದ್ದಾರೆ. ವಲಸೆ ಕಾರ್ಮಿಕರಿಗೆ ಉದ್ಯೋಗ ಸೃಷ್ಟಿಸಲು ಹಲವು ಕ್ರಮಗಳನ್ನು ಕೈಗೊಂಡಿದ್ದಾರೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.