ಬೆಂಗಳೂರು: ವೈಯಕ್ತಿಕ ವಿಚಾರಗಳಿಗೆ ದೇವರನ್ನು ಎಳೆದು ತರುವುದು ಸರಿಯಲ್ಲ. ರಾಜಕೀಯ ಮೇಲಾಟಕ್ಕೆ ಆಣೆ, ಪ್ರಮಾಣ ಮಾಡುವುದು ಸರಿಯಲ್ಲ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಗುರುವಾರ ಅಭಿಪ್ರಾಯಪಟ್ಟರು.
ರಾಜಕಾರಣಿಗಳು ವೈಯಕ್ತಿಕ ಟೀಕೆ– ಟಿಪ್ಪಣಿ ಮಾಡಿಕೊಳ್ಳಲಿ. ಆರೋಪಗಳಿಗೆ ಪ್ರತ್ಯಾರೋಪ ಮಾಡಲಿ. ಅದರಿಂದ ಸಮಸ್ಯೆ ಇಲ್ಲ. ಆದರೆ, ರಾಜಕೀಯ ಕೆಸರೆರಚಾಟಕ್ಕೆ ದೇವರನ್ನು ಮುಂದು ಮಾಡಬಾರದು ಎಂದು ವಿಧಾನಸೌಧ ದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡುತ್ತಾ ಪ್ರತಿಕ್ರಿಯಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.