ಬೆಟ್ಟದಪುರ: ಪಿರಿಯಾಪಟ್ಟಣ ತಾಲ್ಲೂಕಿನ ತಾವರೆಕೆರೆ ಸಮೀಪದ ಈಶ್ವರ ದೇವಾಲಯದ ಬಳಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಚಪ್ಪಲಿ ಇಟ್ಟು ಬುಧವಾರ ಅವಮಾನ ಮಾಡಲಾಗಿದೆ.
ದೇವಾಲಯ ಮುಂಭಾಗದ ರಸ್ತೆಯ ತಡೆಗೋಡೆಗೆ ಅಂಬೇಡ್ಕರ್ ಭಾವಚಿತ್ರವನ್ನು ಒರಗಿಸಿ, ಮಹಿಳೆ ಧರಿಸುವ ಚಪ್ಪಲಿಗಳನ್ನು ಭಾವಚಿತ್ರಕ್ಕೆ ತಾಗುವಂತೆ ಇರಿಸಲಾಗಿದೆ. ಬೆಟ್ಟದಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.