ಚಿತ್ರದುರ್ಗ: ಆನೇಕಲ್ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಟಿಕೆಟ್ ಕೊಡಿಸುವಂತೆ ನಿವೃತ್ತ ಐಎಎಸ್ ಅಧಿಕಾರಿ ಡಾ.ಕೆ.ಶಿವರಾಮ್ ಅವರು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಅವರಿಗೆ ಬಹಿರಂಗವಾಗಿ ಮನವಿ ಮಾಡಿದರು.
ನಗರದ ತರಾಸು ರಂಗಮಂದಿರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ವಿದ್ಯಾರ್ಥಿ ಪರಿಷತ್ನಿಂದ ಶನಿವಾರ ಆಯೋಜಿಸಿದ್ದ ಚಿತ್ರದುರ್ಗ ಜಿಲ್ಲಾ ವಿದ್ಯಾರ್ಥಿಗಳ ಸಮಾವೇಶದಲ್ಲಿ ಮಾತನಾಡಿದ ಅವರು, ‘ನೀವು ಆನೇಕಲ್ನಿಂದ ಚಿತ್ರದುರ್ಗಕ್ಕೆ ಬಂದಿದ್ದೀರಿ. ನನಗೆ ಆನೇಕಲ್ಗೆ ಟಿಕೆಟ್ ಕೊಡಿಸಿ ಆಶೀರ್ವಾದ ಮಾಡಿ. ವೈಯಕ್ತಿಕವಾಗಿ ಕೇಳದೆ, ಎಲ್ಲರ ಸಮ್ಮುಖದಲ್ಲೇ ಕೇಳುತ್ತಿದ್ದೇನೆ’ ಎಂದು ಕೋರಿದರು.
ಇದಕ್ಕೆ ತಮ್ಮ ಭಾಷಣದಲ್ಲಿ ಪ್ರತಿಕ್ರಿಯಿಸಿದ ನಾರಾಯಣಸ್ವಾಮಿ, ‘ನನ್ನ ಜೀವನದಲ್ಲಿ ಈವರೆಗೂ ಕಾನೂನು ಬಿಟ್ಟು ಏನನ್ನೂ ಮಾತಾಡಿಲ್ಲ. ಈ ವಿಚಾರದಲ್ಲಿ ಏನನ್ನೂ ಹೇಳಲ್ಲ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.