ADVERTISEMENT

ದಸರಾ ಉದ್ಘಾಟನೆಗೆ ಡಾ.ಮಂಜುನಾಥ್ ಆಯ್ಕೆ

ಕೊರೊನಾ ವಾರಿಯರ್‌ಗಳಿಗೆ ಸನ್ಮಾನ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2020, 19:36 IST
Last Updated 10 ಅಕ್ಟೋಬರ್ 2020, 19:36 IST
ಮಂಜುನಾಥ್‌
ಮಂಜುನಾಥ್‌   

ಮೈಸೂರು: ದಸರಾ ಮಹೋತ್ಸವ ಉದ್ಘಾಟನೆಗೆ, ಜಯದೇವ ಹೃದ್ರೋಗ ಆಸ್ಪತ್ರೆ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಶನಿವಾರ ತಿಳಿಸಿದ್ದಾರೆ.

ಅ.17ರಂದು ಚಾಮುಂಡಿ ಬೆಟ್ಟದಲ್ಲಿಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸಮ್ಮುಖದಲ್ಲಿ ಅವರು ಉತ್ಸವಕ್ಕೆ ಚಾಲನೆನೀಡಲಿದ್ದಾರೆ. ‘ಈ ಅವಕಾಶವು, ಕೋವಿಡ್ ವಿರುದ್ಧದ ಹೋರಾಟದಲ್ಲಿ ತೊಡಗಿರುವವರಿಗೆ ಸಂದ ಗೌರವ’ ಎಂದು ಡಾ.ಮಂಜುನಾಥ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT