ಬೆಂಗಳೂರು: ತೀವ್ರ ಬರ ಎದುರಿಸುತ್ತಿರುವ 10 ಜಿಲ್ಲೆಗಳಿಗೆ ರಾಜ್ಯ ಸರ್ಕಾರ ಒಟ್ಟು ₹ 38 ಕೋಟಿ ಬಿಡುಗಡೆ ಮಾಡಿದೆ.
ವಿಜಯಪುರ, ದಾವಣಗೆರೆ, ಹಾಸನ, ಕೊಪ್ಪಳ (ತಲಾ ₹ 5 ಕೋಟಿ), ಚಿತ್ರದುರ್ಗ, ಕಲಬುರ್ಗಿ, ಗದಗ, ಕೋಲಾರ, ರಾಮನಗರ, ಯಾದಗರಿ (ತಲಾ ₹ 3 ಕೋಟಿ) ಜಿಲ್ಲೆಗಳಿಗೆ ಹಣ ಬಿಡುಗಡೆ ಮಾಡಲಾಗಿದೆ.
ಬರ ಪರಿಹಾರ ಕಾರ್ಯಗಳಿಗೆ ರಾಜ್ಯ ಪರಿಹಾರ ವಿಪತ್ತು ಪರಿಹಾರ ನಿಧಿಯಿಂದ ಈ ಹಣ ನೀಡಲಾಗಿದೆ.
ಅನುದಾನವನ್ನು ತುರ್ತು ಕುಡಿಯುವ ನೀರಿನ ಪೂರೈಕೆ ಮತ್ತು ಜಾನುವಾರು ಸಂರಕ್ಷಣೆಗೆ ವೆಚ್ಚ ಮಾಡಬೇಕು ಎಂದು ಆದೇಶದಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ.
ಪ್ರಸಕ್ತ ವರ್ಷ ಮುಂಗಾರು ಮತ್ತು ಹಿಂಗಾರು ಅವಧಿಯಲ್ಲಿ ಮಳೆ ಕೊರತೆಯಿಂದ ರಾಜ್ಯದ 162 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಈ ತಾಲ್ಲೂಕುಗಳಲ್ಲಿ ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರು ಮತ್ತು ಮೇವು ಸಮಸ್ಯೆ ತೀವ್ರಗೊಂಡಿತ್ತು. ಇದೀಗ ಕೆಲವು ಜಿಲ್ಲೆಗಳಲ್ಲಿ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸಿದೆ.
ಹೀಗಾಗಿ, ಬರ ಪೀಡಿತ ಪ್ರದೇಶಗಳಿಗೆ ತುರ್ತು ಆಗಿ ಹಣದ ಅವಶ್ಯಕತೆ ಇದೆ ಎಂದು ಜಿಲ್ಲಾಧಿಕಾರಿಗಳು ಬೇಡಿಕೆ ಸಲ್ಲಿಸಿದ್ದರು. ಈ ಬೇಡಿಕೆಗೆ ಪೂರಕವಾಗಿ ಸರ್ಕಾರ ಹಣ ಬಿಡುಗಡೆ ಮಾಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.