ADVERTISEMENT

ಜಂಬೂ ಸವಾರಿ ಮೆರವಣಿಗೆ: ಕಲಾ ತಂಡಗಳಿಂದ ಅರ್ಜಿ

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2022, 22:19 IST
Last Updated 19 ಆಗಸ್ಟ್ 2022, 22:19 IST

ಮೈಸೂರು: ನಾಡಹಬ್ಬ ದಸರೆಯ ‘ಜಂಬೂ ಸವಾರಿ’ ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ರಾಜ್ಯದ ಎಲ್ಲ ಜಿಲ್ಲೆಗಳ ಸಾಂಸ್ಕೃತಿಕ ಹಾಗೂ ಜಾನಪದ ಕಲಾ ತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅ.5ರ ವಿಜಯದಶಮಿಯಂದು ಮೆರವಣಿಗೆ ನಡೆಯಲಿದ್ದು, ತಂಡದ ಭಾವಚಿತ್ರ, ವಿಳಾಸ, ಮೊಬೈಲ್‌ ಸಂಖ್ಯೆ ಹಾಗೂಸದಸ್ಯರ ವಿವರವಿರುವ ಅರ್ಜಿಯನ್ನುಸೆ.10ರೊಳಗೆ ‘ಉಪ ವಿಶೇಷಾಧಿಕಾರಿಗಳು, ದಸರಾ ಮೆರವಣಿಗೆ ಉಪಸಮಿತಿ ಹಾಗೂ ಪೊಲೀಸ್‌ ಆಯುಕ್ತರು, ಮೈಸೂರು ನಗರ’ ಅಥವಾ ‘ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮೈಸೂರು’– ಈ ವಿಳಾಸಕ್ಕೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸಿದ ಕಲಾತಂಡಗಳ ಆಯ್ಕೆ ಮಾಡುವ ಪ್ರಕ್ರಿಯೆಯನ್ನು ಘಟಕದಿಂದ ರಚಿಸಲಾದ ತಜ್ಞರ ಸಮಿತಿ ನಿರ್ಧರಿಸಲಿದೆ ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.