ಬೆಂಗಳೂರು: ಸಾಗರದ ಅಕ್ಷಯ ಪಂಡಿತ್ ಅವರ ‘ಬಯಲಲಿ ತೇಲುತ ತಾನು’ಅಪ್ರಕಟಿತ ಕಥಾ ಸಂಕಲನವು ‘ಈ ಹೊತ್ತಿಗೆ ಕಥಾ ಪ್ರಶಸ್ತಿ’ಗೆ ಆಯ್ಕೆಯಾಗಿದೆ.
ಈ ಪ್ರಶಸ್ತಿಯು ₹ 10 ಸಾವಿರ ಹಾಗೂ ಫಲಕವನ್ನು ಒಳಗೊಂಡಿದೆ. ವಿಮರ್ಶಕ ಡಾ.ಓ.ಎಲ್. ನಾಗಭೂಷಣಸ್ವಾಮಿ ಅವರು ಪ್ರಶಸ್ತಿ ಆಯ್ಕೆಗೆ ತೀರ್ಪುಗಾರರಾಗಿದ್ದರು. 26 ವಯೋಮಿತಿ ಒಳಗಿನವರಿಗೆ ಆಯೋಜಿಸಿದ ಕಥಾ ಸ್ಪರ್ಧೆಗೆ ಯೋಗ್ಯವಾದ ಕಥೆಗಳು ಬರದ ಕಾರಣ ಬಹುಮಾನವನ್ನು ನೀಡುತ್ತಿಲ್ಲ. ಇದಕ್ಕೆ ಪರ್ಯಾಯವಾಗಿ ಮುಂದಿನ ದಿನಗಳಲ್ಲಿ ಎರಡು ದಿನಗಳ ಆನ್ಲೈನ್ ಕಥಾ ಕಮ್ಮಟವನ್ನು ಏರ್ಪಡಿಸಲಾಗುತ್ತದೆ. ಈ ವರ್ಷ ಸ್ಪರ್ಧೆಯಲ್ಲಿ ಭಾಗವಹಿಸಿದ ಕಥೆಗಾರರಿಗೆ ಉಚಿತ ಪ್ರವೇಶ ನೀಡುವ ಮೂಲಕ ಅಗತ್ಯ ಮಾರ್ಗದರ್ಶನ ಒದಗಿಸಲಾಗುತ್ತದೆ. ಈ ಮೂಲಕ ಪ್ರೋತ್ಸಾಹಿಸಲಾಗುತ್ತದೆ. ಸಾಹಿತಿ ಚಿದಂಬರ ನರೇಂದ್ರ ಅವರು ಈ ವಿಭಾಗದ ತೀರ್ಪುಗಾರರಾಗಿದ್ದರು ಎಂದು ಈ ಹೊತ್ತಿಗೆಯ ವ್ಯವಸ್ಥಾಪಕ ಟ್ರಸ್ಟಿ ಜಯಲಕ್ಷ್ಮೀ ಪಾಟೀಲ್ ತಿಳಿಸಿದ್ದಾರೆ.
ಬೆಂಗಳೂರಿನ ಜೆ.ಪಿ.ನಗರದ ಕಪ್ಪಣ್ಣ ಅಂಗಳ ಸಭಾಂಗಣದಲ್ಲಿ ಮೇ 1ರಂದು ಹೊನಲು ಕಾರ್ಯಕ್ರಮ ನಡೆಯಲಿದ್ದು, ಅಂದೇ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.