ADVERTISEMENT

ವಿನಾಯಕ, ಚಾಂದ್‌ ಪಾಷಗೆ ‘ಈ ಹೊತ್ತಿಗೆ ಪ್ರಶಸ್ತಿ’

​ಪ್ರಜಾವಾಣಿ ವಾರ್ತೆ
Published 11 ಜನವರಿ 2023, 19:30 IST
Last Updated 11 ಜನವರಿ 2023, 19:30 IST
ವಿನಾಯಕ ಅರಳಸುರಳಿ ಮತ್ತು ಚಾಂದ್ ಪಾಷ
ವಿನಾಯಕ ಅರಳಸುರಳಿ ಮತ್ತು ಚಾಂದ್ ಪಾಷ   

ಬೆಂಗಳೂರು: ಈ ಹೊತ್ತಿಗೆ ಟ್ರಸ್ಟ್ ನೀಡುವ ‘ಈ ಹೊತ್ತಿಗೆ ಕಥಾ ಪ್ರಶಸ್ತಿ’ಗೆ ಶಿವಮೊಗ್ಗದ ವಿನಾಯಕ ಅರಳಸುರಳಿ ಅವರ ‘ಮರ ಹತ್ತದ ಮೀನು’ ಕಥಾ ಸಂಕಲನ, ಕಲಬುರಗಿಯ ಚಾಂದ್ ಪಾಷ ಅವರ ‘ಒದ್ದೆಗಣ್ಣಿನ ದೀಪ’ ಕವನ ಸಂಕಲನ ಆಯ್ಕೆಯಾಗಿವೆ.

‌ಪ್ರಶಸ್ತಿಗಳು ತಲಾ ₹ 10 ಸಾವಿರ ನಗದು ಒಳಗೊಂಡಿವೆ. ವಿಮರ್ಶಕ ಎಸ್.ಆರ್. ವಿಜಯಶಂಕರ ಅವರು ಕಥಾ ಪ್ರಶಸ್ತಿ ಹಾಗೂ ನಾಟಕಕಾರ ಕೆ.ವೈ. ನಾರಾಯಣಸ್ವಾಮಿ ಅವರು ಕಾವ್ಯ ಪ್ರಶಸ್ತಿಯ ತೀರ್ಪುಗಾರರಾಗಿದ್ದರು.

ಮಾರ್ಚ್‌ನಲ್ಲಿ ಬೆಂಗಳೂರಿನ ಜೆ.ಪಿ. ನಗರದಲ್ಲಿರುವ ಕಪ್ಪಣ್ಣ ಅಂಗಳ ಸಭಾಂಗಣದಲ್ಲಿ ಪ‍್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ ಎಂದು ಈ ಹೊತ್ತಿಗೆ ಸಂಚಾಲಕಿ ಜಯಲಕ್ಷ್ಮಿ ಪಾಟೀಲ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.