ADVERTISEMENT

ಪರಿಷತ್ ಚುನಾವಣೆ | ಬಿಜೆಪಿಗೆ ಬೆಂಬಲದ ಬಗ್ಗೆ ಶೀಘ್ರ ನಿರ್ಧಾರ: ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2021, 8:42 IST
Last Updated 1 ಡಿಸೆಂಬರ್ 2021, 8:42 IST
ಕುಮಾರಸ್ವಾಮಿ
ಕುಮಾರಸ್ವಾಮಿ   

ರಾಮನಗರ: ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ನೀಡುವಂತೆ ಯಡಿಯೂರಪ್ಪ ಕೇಳಿದ್ದು, ಈ ಬಗ್ಗೆ ಸದ್ಯದಲ್ಲೇ ತೀರ್ಮಾನ ಮಾಡುತ್ತೇವೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಬಿಡದಿಯಲ್ಲಿ ಬುಧವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು ' ಕಾಂಗ್ರೆಸ್ ನಾಯಕರು ನಮಗೆ ಜೆಡಿಎಸ್ ಬೆಂಬಲ ಬೇಡ ಎಂದು ಹೇಳಿದ್ದಾರೆ. ಕರೆಯದೇ ಇರುವವರ ಮನೆಯ ಬಾಗಿಲಿಗೆ ಹೋಗಲು ಆಗದು' ಎಂದರು.

ಮೋದಿ ಅವರಿಗೆ ದೇವೇಗೌಡರ ಮೇಲೆ ಅಪಾರ ವಿಶ್ವಾಸ ಹಾಗೂ ಗೌರವ ಇದೆ. ಹಾಸನದಲ್ಲಿ ಐಐಟಿ ಸ್ಥಾಪನೆ ವಿಚಾರದಲ್ಲಿ ಗೌಡರು ಮೋದಿಯವರನ್ನು ಭೇಟಿ ಮಾಡಿದ್ದಾರೆ. ಮೈತ್ರಿ ಕುರಿತು ಅವರಿಬ್ಬರ ಬಗ್ಗೆ ಮಾತುಕತೆ ನಡೆದಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ದೇವೇಗೌಡರು ದೆಹಲಿಯಿಂದ ಬಂದ ಬಳಿಕ ಈ ಬಗ್ಗೆ ಮಾತುಕತೆ‌ ನಡೆಸುತ್ತೇನೆ ಎಂದರು.

ADVERTISEMENT

ಪರಿಷತ್ ಚುನಾವಣೆಯು ಮುಂದಿನ ವಿಧಾನಸಭೆ ಚುನಾವಣೆಯ ದಿಕ್ಸೂಚಿ ಅಲ್ಲ. ಆದರೆ ಚುನಾಯಿತ ಪ್ರತಿನಿಧಿಗಳ ಬೆಂಬಲ ಯಾರಿಗೆ ಎಂಬುದು ಗೊತ್ತಾಗಲಿದೆ ಎಂದರು.

ಪಕ್ಷ ಬಯಸಿದರೆ‌ ಮತ್ತೆ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂಬ ನಿಖಿಲ್ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ ' ಇದಕ್ಕೆ ಇನ್ನೂ ಎರಡು ವರ್ಷ ಸಮಯ ಇದೆ. ನೋಡೋಣ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.