ADVERTISEMENT

ಗಳಿಕೆ ರಜೆ ನಗದೀಕರಣ ತಡೆ ಆದೇಶ ವಾಪಸ್‌: ಭರವಸೆ

ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಭರವಸೆ

​ಪ್ರಜಾವಾಣಿ ವಾರ್ತೆ
Published 12 ಜನವರಿ 2021, 17:36 IST
Last Updated 12 ಜನವರಿ 2021, 17:36 IST

ಬೆಂಗಳೂರು: ‘ಸಚಿವಾಲಯ ನೌಕರರ ಗಳಿಕೆ ರಜೆ ನಗದೀಕರಣ ತಡೆಹಿಡಿದಿರುವುದನ್ನು ವಾಪಸ್‌ ಪಡೆಯುವುದಾಗಿ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಭರವಸೆ ನೀಡಿದ್ದಾರೆ’ ಎಂದು ಸಚಿವಾಲಯ ನೌಕರರ ಸಂಘದ ಅಧ್ಯಕ್ಷ ಪಿ. ಗುರುಸ್ವಾಮಿ ತಿಳಿಸಿದ್ದಾರೆ.

‘ನೌಕರರ ಇತರ ಹಕ್ಕೊತ್ತಾಯಗಳಾದ ತುಟ್ಟಿ ಭತ್ಯೆ ಸ್ಥಗಿತಗೊಳಿಸಿರುವುದನ್ನು ತೆರವುಗೊಳಿಸಿ ಬಾಕಿ ಉಳಿದ ತುಟ್ಟಿ ಭತ್ಯೆ ಬಿಡುಗಡೆಗೊಳಿಸಬೇಕು, ನಿವೃತ್ತಿ ಹೊಂದಿದ ಅಧಿಕಾರಿ, ನೌಕರರ ಮರು ನೇಮಕಾತಿ ನಿಲ್ಲಿಸಬೇಕು, ಹೊರಗುತ್ತಿಗೆ ನೇಮಕಾತಿ ಸ್ಥಗಿತಗೊಳಿಸಬೇಕು ಹಾಗೂ ನೌಕರ ವಿರೋಧಿ ನಡತೆ ನಿಯಮಾವಳಿಗಳನ್ನು ಹಿಂದಕ್ಕೆ ಪಡೆಯುವ ಬಗ್ಗೆ ಪರಿಶೀಲಿಸಿ ಕ್ರಮಕೈಗೊಳ್ಳುವುದಾಗಿ ತಿಳಿಸಿದ್ದಾರೆ’ ಎಂದೂ ಹೇಳಿದ್ದಾರೆ.

ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಚಿವಾಲಯ ನೌಕರರ ಸಂಘ, ವಿಧಾನ ಪರಿಷತ್‌ ಸಚಿವಾಲಯ ನೌಕರರ ಸಂಘ ಮತ್ತು ವಿಧಾನಸಭೆ ಸಚಿವಾಲಯ ನೌಕರರ ಸಂಘದ ವತಿಯಿಂದ ವಿಕಾಸೌಧದ ಮುಂಭಾಗದಲ್ಲಿರುವ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಮಂಗಳವಾರ ಮಧ್ಯಾಹ್ನ ಪ್ರತಿಭಟನೆ ನಡೆಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.