ADVERTISEMENT

ಗ್ರಹಣ: ಕೃಷ್ಣಮಠದಲ್ಲಿ ಇಂದು ಭೋಜನ ಇಲ್ಲ

ಇಂದು ಮಠಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿ

​ಪ್ರಜಾವಾಣಿ ವಾರ್ತೆ
Published 25 ಡಿಸೆಂಬರ್ 2019, 11:57 IST
Last Updated 25 ಡಿಸೆಂಬರ್ 2019, 11:57 IST

ಉಡುಪಿ: ಗ್ರಹಣದ ಪ್ರಯುಕ್ತ ಕೃಷ್ಣಮಠದಲ್ಲಿ ಬುಧವಾರ ರಾತ್ರಿ ಭಕ್ತರಿಗೆ ಭೋಜನದ ವ್ಯವಸ್ಥೆ ಇರುವುದಿಲ್ಲ ಎಂದು ಪರ್ಯಾಯ ಪಲಿಮಾರು ಮಠದ ವಿದ್ಯಾಧೀಶ ತೀರ್ಥ ಸ್ವಾಮೀಜಿ ತಿಳಿಸಿದರು.

ಮಂಗಳವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಗ್ರಹಣ ಹಿನ್ನೆಲೆಯಲ್ಲಿ ಬುಧವಾರ ಮುಂಚಿತವಾಗಿ ಸಂಜೆ 5.30ರಿಂದ 7.30ರೊಳಗೆ ಎಲ್ಲ ಪೂಜೆಗಳು ಮುಕ್ತಾಯವಾಗಲಿವೆ ಎಂದು ತಿಳಿಸಿದರು.

26ರಂದು ಬೆಳಿಗ್ಗೆ 11 ಗಂಟೆಯ ನಂತರ ಪೂಜೆಗಳು ಆರಂಭವಾಗಲಿದ್ದು, ಭೋಜನ ತಡವಾಗಲಿದ್ದು, ಮಧ್ಯಾಹ್ನ 2ರ ನಂತರ ಭಕ್ತರಿಗೆ ಊಟದ ವ್ಯವಸ್ಥೆ ಮಾಡಲಾಗುವುದು ಎಂದು ಶ್ರೀಗಳು ತಿಳಿಸಿದರು.‌

ADVERTISEMENT

ಇಂದು ಸಿಎಂ ಭೇಟಿ:‌

ಬುಧವಾರ ಮಧ್ಯಾಹ್ನ 2.30ಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಕೃಷ್ಣಮಠಕ್ಕೆ ಭೇಟಿ ನೀಡುತ್ತಿದ್ದು, ಮಠದ ಪಾರ್ಕಿಂಗ್ ಪ್ರದೇಶದಲ್ಲಿ ನಿರ್ಮಿಸಿರುವಶೌಚಾಲಯ ಸಮುಚ್ಛಯ ಉದ್ಘಾಟಿಸಲಿದ್ದಾರೆ. ಬಳಿಕ ರಾಜಾಂಗಣದಲ್ಲಿ ಚಿಣ್ಣರ ಮಾಸ ಸಮಾರೋಪ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.