ADVERTISEMENT

ಬಜೆಟ್‌ ದಿನವೇ ಡಿಕೆಶಿ ವಿಚಾರಣೆ, ಇ.ಡಿ ಕಚೇರಿಗೆ ಹಾಜರಾಗಬೇಕಿದೆ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2019, 20:00 IST
Last Updated 5 ಫೆಬ್ರುವರಿ 2019, 20:00 IST
   

ಬೆಂಗಳೂರು: ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಬಜೆಟ್‌ ಮಂಡಿಸಲಿರುವ ಇದೇ 8ರಂದು ಜಲ ಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್‌ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಬೇಕಿದೆ.

‘ಲೇವಾದೇವಿ ನಿಯಂತ್ರಣ ಕಾಯ್ದೆ’ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ಫೆ. 8ರಂದು ಬೆಳಿಗ್ಗೆ 10.30ಕ್ಕೆ ಖುದ್ದು ವಿಚಾರಣೆಗೆ ಹಾಜರಾಗಿ’ ಎಂದು ಶಿವಕುಮಾರ್‌ಗೆ ಜಾರಿ ನಿರ್ದೇಶನಾಲಯದ ಸಹಾಯಕ ನಿರ್ದೇಶಕ ಸೌರಭ್‌ ಮೆಹ್ತಾ ಸಮನ್ಸ್‌ ಜಾರಿಗೊಳಿಸಿದ್ದಾರೆ.

ಈ ಮಧ್ಯೆ ಸಮನ್ಸ್‌ಗೆ ತಡೆ ನೀಡುವಂತೆ ಮನವಿ ಮಾಡಿ ಶಿವಕುಮಾರ್‌ ಹೈಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿ ನ್ಯಾಯಮೂರ್ತಿ ಅರವಿಂದ ಕುಮಾರ್‌ ಅವರ ಏಕಸದಸ್ಯ ನ್ಯಾಯಪೀಠದ ಮುಂದೆ ಬುಧವಾರ ವಿಚಾರಣೆಗೆ ಬರಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.