ಬೆಳಗಾವಿ: ‘ಕೋವಿಡ್ ಪ್ರಮಾಣ ಕಡಿಮೆಯಾಗಿ ಎಲ್ಲವೂ ಸಾಮಾನ್ಯ ಸ್ಥಿತಿಗೆ ಮರಳಿದರೆ ಮಾತ್ರ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ನಡೆಸಲಾಗುವುದು. ಇಲ್ಲವಾದಲ್ಲಿ ಅದನ್ನೂ ರದ್ದುಪಡಿಸಲಾಗುವುದು’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.
ಇಲ್ಲಿನ ಸಾಂಬ್ರಾ ವಿಮಾನನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ರದ್ದು ಮಾಡಲಾಗಿರುವ ಬಗ್ಗೆ ಶಿಕ್ಷಣ ಸಚಿವ ಸುರೇಶ್ಕುಮಾರ್ ವಿವರಣೆ ನೀಡಿದ್ದಾರೆ. ಪರಿಸ್ಥಿತಿ ನೋಡಿಕೊಂಡು ಎಸ್ಸೆಸ್ಸೆಲ್ಸಿ ಪರೀಕ್ಷೆ ಬಗ್ಗೆ ನಿರ್ಧರಿಸಲಾಗುವುದು. ಈ ವಿಷಯದಲ್ಲಿ ಏನೂ ಗೊಂದಲವಿಲ್ಲ’ ಎಂದರು.
‘ನಾನು ಸುರೇಶ್ ಕುಮಾರ್ ಜೊತೆ ಮಾತನಾಡಿದ್ದೇನೆ. ಪರಿಸ್ಥಿತಿ ಸುಧಾರಣೆ ಆದರೆ ಮಾತ್ರ ಒಂದೆರಡು ದಿನಗಳಲ್ಲಿ ಪರೀಕ್ಷೆ ಮಾಡುತ್ತೇವೆ ಎಂದಿದ್ದಾರೆ. ಮಕ್ಕಳಿಗೆ ಏನೂ ತೊಂದರೆ ಆಗುವುದಿಲ್ಲ. ಪೋಷಕರು ಕೂಡ ಗೊಂದಲಕ್ಕೆ ಒಳಗಾಗುವುದು ಬೇಡ’ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.