ADVERTISEMENT

ಶೃಂಗೇರಿ ಪ್ರವಾಸಕ್ಕೆ ತೆರಳುತ್ತಿದ್ದ ವಿದ್ಯಾರ್ಥಿಗಳಿದ್ದ ಬಸ್ ಪಲ್ಪಿ

ಭದ್ರವತಿ ಪೂರ್ಣಪ್ರಜ್ಞಾ ಶಾಲೆ ವಿದ್ಯಾರ್ಥಿಗಳ ಬಸ್; ಎನ್‌ಆರ್‌ ಪುರ ಬಳಿ ಅಪಘಾತ

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2018, 4:12 IST
Last Updated 10 ನವೆಂಬರ್ 2018, 4:12 IST
   

ಚಿಕ್ಕಮಗಳೂರು: ಜಿಲ್ಲೆಯ ಎನ್.ಆರ್.ಪುರ ತಾಲ್ಲೂಕಿನ ಸೌತಿಕೆರೆ ಬಳಿ ಶಾಲಾ ವಾಹನ ಪಲ್ಟಿಯಾಗಿದ್ದು, ವಿದ್ಯಾರ್ಥಿನಿ ದಿಯಾ (15) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. 17 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

ದಿಯಾ ಅವರು ಭದ್ರಾವತಿಯ ವಿಐಎಸ್ಎಲ್ ಕಾಲೊನಿ ನಿವಾಸಿ ಕರ್ನಲ್ ಶೆಖಾವತ್ ಪುತ್ರಿ.

ತೀವ್ರವಾಗಿ ಗಾಯಗೊಂಡಿರುವ ಕಿಶನ್, ನಂದನ್, ಯಶಸ್ವಿ, ಸುಮುಖ ಮತ್ತು ವೈಷ್ಣವಿ ಅವರನ್ನುಶಿವಮೊಗ್ಗದ ಆಸ್ಪತ್ರೆಗೆಒಯ್ಯಲಾಗಿದೆ. ಐವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಎನ್ಆರ್ ಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ.

ADVERTISEMENT

ಭದ್ರಾವತಿಯ ಪೂರ್ಣಪ್ರಜ್ಞಾ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳು ಶೃಂಗೇರಿಗೆ ಪ್ರವಾಸ ತೆರಳುತ್ತಿದ್ದಾಗ ಅವಘಡ ಸಂಭವಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.