ನವದೆಹಲಿ: ಚುನಾವಣಾ ಬಾಂಡ್ ಎಂಬುದು ರಾಜಕೀಯ ಭ್ರಷ್ಟಾಚಾರ ಎಂದು ಸಾಮಾಜಿಕ ಹೋರಾಟಗಾರ ಎಸ್.ಆರ್.ಹಿರೇಮಠ ಆರೋಪಿಸಿದರು.
ಶುಕ್ರವಾರ ಇಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ಲೋಕಸಭೆ ಚುನಾವಣೆಯ ವೇಳಾಪಟ್ಟಿ ಪ್ರಕಟವಾಗುವ ಮುನ್ನ ಜನರಿಗೆ ಇದರ ಬಗ್ಗೆ ಮಾಹಿತಿ ಸಿಗುವಂತೆ ಸುಪ್ರೀಂ ಕೋರ್ಟ್ ಮಾಡಿದೆ. ಚುನಾವಣಾ ಆಯೋಗಕ್ಕೆ ಸ್ವಾಯತ್ತತೆ ನೀಡಲು ಸುಪ್ರೀಂ ಕೋರ್ಟ್ ಧೈರ್ಯ ಮಾಡಬೇಕು. ಈ ಸಂಬಂಧ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದ್ದು, ಶೀಘ್ರ ವಿಚಾರಣೆಗೆ ಬರಲಿದೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.