ADVERTISEMENT

ಪರಿಷತ್‌ ಕಣದಲ್ಲಿ ಮೂವರು

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2021, 5:50 IST
Last Updated 27 ನವೆಂಬರ್ 2021, 5:50 IST

ಪ್ರಜಾವಾಣಿ ವಾರ್ತೆ

ಕಲಬುರಗಿ: ಕಲಬುರಗಿ– ಯಾದಗಿರಿ ವಿಧಾನ ಪರಿಷತ್‌ ಕ್ಷೇತ್ರದ ಚುನಾವಣಾ ಕಣದಲ್ಲಿ ಕಾಂಗ್ರೆಸ್‌, ಬಿಜೆಪಿ ಹಾಗೂ ಒಬ್ಬ ಪಕ್ಷೇತರ ಸೇರಿ ಮೂವರು ಕಣದಲ್ಲಿ ಉಳಿದಿದ್ದಾರೆ. ನಾಮಪತ್ರ ಹಿಂಪಡೆಯಲು ನವೆಂಬರ್ 26 ಕೊನೆಯ ದಿನವಾಗಿತ್ತು. ಉಮೇದುವಾರಿಕೆ ಸಲ್ಲಿಸಿದ್ದ ಮೂವರ ಪೈಕಿ ಯಾರೂ ನಾಮಪ‍ತ್ರ ಹಿಂಪಡೆದಿಲ್ಲ ಎಂದು ಚುಣಾವಣಾಧಿಕಾರಿ ತಿಳಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಬಿ.ಜಿ. ‍ಪಾಟೀಲ, ಕಾಂಗ್ರೆಸ್‌ನಿಂದ ಶಿವಾನಂದ ಪಾಟೀಲ ಮರತೂರ ಹಾಗೂ ಪಕ್ಷೇತರರಾಗಿ ಕಣಕ್ಕಿಳಿದ ಮಲ್ಲಿಕಾರ್ಜುನ ಕೊಡ್ಲಿ ಮಧ್ಯೆ ಸ್ಪರ್ಧೆ ನಡೆಯಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.