ADVERTISEMENT

ರಾಜ್ಯದಲ್ಲಿ ಶೀಘ್ರವೇ ಚುನಾವಣೆ ನಡೆಯಲಿದೆ: ಸಂಸದ ಡಿ.ಕೆ. ಸುರೇಶ್

​ಪ್ರಜಾವಾಣಿ ವಾರ್ತೆ
Published 29 ಮೇ 2020, 13:06 IST
Last Updated 29 ಮೇ 2020, 13:06 IST
ಸಂಸದ ಡಿ.ಕೆ. ಸುರೇಶ್
ಸಂಸದ ಡಿ.ಕೆ. ಸುರೇಶ್   

ರಾಮನಗರ: ಬಿಜೆಪಿಯವರೇ ಸರ್ಕಾರವನ್ನು ಬೀಳಿಸಲಿದ್ದು, ಶೀಘ್ರದಲ್ಲೇ ಚುನಾವಣೆ ನಡೆಯಲಿದೆ ಎಂದು ಸಂಸದ ಡಿ.ಕೆ. ಸುರೇಶ್ ಹೇಳಿದರು.

ಮಾಗಡಿಯಲ್ಲಿ ಶುಕ್ರವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ. ನರೇಂದ್ರ ಮೋದಿಯಿಂದಲೂ ಕಾಂಗ್ರೆಸ್ ಕಾರ್ಯಕ್ರಮ ಅಳಿಸಲು ಸಾಧ್ಯವಿಲ್ಲ ಎಂದರು.

ಕೇಂದ್ರ ಘೋಷಿಸಿರುವ ಬಜೆಟ್ ಯಾವುದೇ ಬಡವರಿಗೆ ಅನುಕೂಲವಾಗುವುದಿಲ್ಲ. ಸರ್ಕಾರವನ್ನು ನಾವ್ಯಾರು ಬೀಳಿಸುವ ಅಗತ್ಯವಿಲ್ಲ. ಸರ್ಕಾರವನ್ನು ಅವರೇ ಬೀಳಿಸಿಕೊಳ್ಳುತ್ತಾರೆ. ಸದ್ಯದಲ್ಲೇ ಹೊಸ ಸರ್ಕಾರ ಬರಲಿದೆ. ನಾವೆಲ್ಲರೂ ಚುನಾವಣೆಗೆ ಸಿದ್ಧರಾಗಿ, ಕಾಂಗ್ರೆಸ್ ಪಕ್ಷವನ್ನು ಈಗಿನಿಂದಲೇ ಕಟ್ಟಬೇಕು ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.