ADVERTISEMENT

ಆನೆ ತುಳಿದು ವೃದ್ಧೆ ಸಾವು

​ಪ್ರಜಾವಾಣಿ ವಾರ್ತೆ
Published 20 ಜನವರಿ 2019, 18:23 IST
Last Updated 20 ಜನವರಿ 2019, 18:23 IST
ಆನೆ ತುಳಿತದಿಂದ ಮೃತಪಟ್ಟ ಶಿವಮ್ಮ ಅವರ ಶವದ ಮುಂದೆ ರೋದಿಸುತ್ತಿರುವ ಕುಟುಂಬದವರು
ಆನೆ ತುಳಿತದಿಂದ ಮೃತಪಟ್ಟ ಶಿವಮ್ಮ ಅವರ ಶವದ ಮುಂದೆ ರೋದಿಸುತ್ತಿರುವ ಕುಟುಂಬದವರು   

ಚಾಮರಾಜನಗರ: ತಾಲ್ಲೂಕಿನ ಮಂಗಲ ಗ್ರಾಮದ ಬಳಿಯ ಮಹಾಂತಾಳಪುರದಲ್ಲಿ ಕಾಡಾನೆಯು ವೃದ್ಧೆಯೊಬ್ಬರನ್ನು ತುಳಿದು ಸಾಯಿಸಿದೆ.

ಶನಿವಾರ ಸಂಜೆ ಈ ಘಟನೆ ನಡೆದಿದ್ದು, ಭಾನುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಮೃತಪಟ್ಟವರನ್ನು ಶಿವಮ್ಮ (75) ಎಂದು ಗುರುತಿಸಲಾಗಿದೆ.

ಮೂರು ಕಾಡಾನೆಗಳು ಶನಿವಾರ ಈ ಭಾಗದಲ್ಲಿ ಬೀಡುಬಿಟ್ಟಿದ್ದವು. ಸಂಜೆ 6 ಗಂಟೆಯ ಹೊತ್ತಿಗೆ ಬಹಿರ್ದೆಸೆಗೆಂದು ತೋಟದ ಹೊರಭಾಗದಲ್ಲಿರುವ ತೋಪಿಗೆ ಶಿವಮ್ಮ ಹೋಗಿದ್ದರು. ಈ ಸಂದರ್ಭದಲ್ಲಿ ಆನೆ ದಾಳಿ ನಡೆಸಿದೆ.

ADVERTISEMENT

ಪ್ರತಿಭಟನೆ: ಆಕ್ರೋಶಗೊಂಡ ಗ್ರಾಮಸ್ಥರು, ಮಹಾಂತಾಳಪುರ ಗೇಟ್‌ ಬಳಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

₹ 5 ಲಕ್ಷ ಪರಿಹಾರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಡಾ.ಪಿ.ಶಂಕರ್‌, ಇಲಾಖೆ ವತಿಯಿಂದ ಶಿವಮ್ಮ ಕುಟುಂಬಕ್ಕೆ ₹ 5 ಲಕ್ಷ ಪರಿಹಾರ ನೀಡಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.