ADVERTISEMENT

ಕಾಡಾನೆ ದಾಳಿ: ಕಾರ್ಮಿಕ ಸಾವು

​ಪ್ರಜಾವಾಣಿ ವಾರ್ತೆ
Published 4 ಮೇ 2019, 19:47 IST
Last Updated 4 ಮೇ 2019, 19:47 IST

ಹಂಪಾಪುರ (ಮೈಸೂರು): ಸಮೀಪದ ಮಾದಾಪುರ ಗ್ರಾಮದಲ್ಲಿ, ವ್ಯಕ್ತಿಯೊಬ್ಬರು ಶನಿವಾರ ಬೆಳಿಗ್ಗೆ ಬಹಿರ್ದೆಸೆಗೆ ತೆರಳಿದ್ದ ವೇಳೆ ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟಿದ್ದಾರೆ.

ಯಾದಗಿರಿ ಜಿಲ್ಲೆಯ ಕಗ್ಗೇರಿಯ ಹನುಮಂತರಾಯ (45) ಮೃತರು.

ಘಟನೆ ವಿವರ: ಹೆಬ್ಬಳ್ಳ ಬಲದಂಡೆ ನಾಲೆಯ ಕಾಲುವೆ ನಿರ್ಮಾಣಕ್ಕೆಂದು ವಿಜಯಪುರ ಮತ್ತು ಯಾದಗಿರಿಯಿಂದ ಕೂಲಿ ಕಾರ್ಮಿಕರು ಎಚ್.ಡಿ.ಕೋಟೆ ತಾಲ್ಲೂಕಿಗೆ ಬಂದಿದ್ದಾರೆ. ಕಾಲುವೆ ಪಕ್ಕದಲ್ಲಿ ಟೆಂಟ್ ನಿರ್ಮಿಸಿಕೊಂಡು ವಾಸಿಸುತ್ತಿದ್ದಾರೆ. ಇಲ್ಲಿಯೇ ವಾಸಿಸುತ್ತಿದ್ದ ಹನುಮಂತರಾಯ, ಮುಂಜಾನೆ ಬಯಲು ಬಹಿರ್ದೆಸೆಗೆ ತೆರಳಿದ ವೇಳೆಯಲ್ಲಿ ಅವರ ಮೇಲೆ ಕಾಡಾನೆಗಳು ದಾಳಿ ನಡೆಸಿವೆ. ಆಸ್ಪತ್ರೆ ಮಾರ್ಗ ಮಧ್ಯದಲ್ಲಿಯೇ ಮೃತಪಟ್ಟಿದ್ದಾರೆ.

ADVERTISEMENT

ಪರಿಹಾರ: ಹನುಮಂತರಾಯ ಅವರ ಕುಟುಂಬದವರಿಗೆ ₹ 2 ಲಕ್ಷ ಪರಿಹಾರದ ಚೆಕ್ ನೀಡಿದ್ದು, ₹ 3 ಲಕ್ಷ ಪರಿಹಾರವನ್ನು ಮುಂದಿನ ದಿನಗಳಲ್ಲಿ ನೀಡಲಾಗುವುದು ಎಂದು ಅರಣ್ಯ ಇಲಾಖೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.