ADVERTISEMENT

ಮೈಸೂರು: ಆನೆ ದಾಳಿಗೆ ವ್ಯಕ್ತಿ ಬಲಿ 

​ಪ್ರಜಾವಾಣಿ ವಾರ್ತೆ
Published 24 ಜನವರಿ 2020, 7:35 IST
Last Updated 24 ಜನವರಿ 2020, 7:35 IST
   

ಮೈಸೂರು: ಜಿಲ್ಲೆಯ ಸರಗೂರು ತಾಲ್ಲೂಕಿನ ಹುಲ್ಲೇಮಾಳ ಗ್ರಾಮದಲ್ಲಿ ಪ್ರಕಾಶ್ (45) ಎಂಬುವವರನ್ನು ಆನೆಯೊಂದು ತುಳಿದು ಕೊಂದಿದೆ.

ಪ್ರಕಾಶ್‌ ಅವರು ತಮ್ಮ ಜಮೀನಿನಲ್ಲಿ ಕೊಯ್ಲು ಮಾಡಿದ್ದ ರಾಗಿಯನ್ನು ಕಾಯಲೆಂದು ಗುರುವಾರ ರಾತ್ರಿ ಅಲ್ಲೇ ಮಲಗಿದ್ದರು. ಆಗ ಆನೆಯೊಂದು ದಾಳಿ ನಡೆಸಿದೆ. ಅದರ ತುಳಿತಕ್ಕೆ ಸಿಕ್ಕ ಇವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಶುಕ್ರವಾರ ಬೆಳಿಗ್ಗೆ ಕುಟುಂಬದವರು ಜಮೀನಿನ ಬಳಿಗೆ ಬಂದಾಗ ವಿಷಯ ಗೊತ್ತಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.