ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ನೀಡಲಾಗುತ್ತಿರುವ ತುಟ್ಟಿಭತ್ಯೆ ಪ್ರಮಾಣವನ್ನು ಶೇ 2ರಷ್ಟು ಹೆಚ್ಚಿಸಲಾಗಿದೆ.
ನೌಕರರು ಪಡೆಯುತ್ತಿರುವ ಮೂಲತನಕ್ಕೆ ಶೇ 1.75ರಷ್ಟು ತುಟ್ಟಿಭತ್ಯೆ ನೀಡಲಾಗುತ್ತಿದೆ. ಇದನ್ನು ಶೇ 3.75 ಕ್ಕೆ ಹೆಚ್ಚಿಸಲಾಗಿದೆ.
ಪರಿಷ್ಕೃತ ತುಟ್ಟಿಭತ್ಯೆ ದರ ಜುಲೈ 1ರಿಂದ ಪೂರ್ವಾನ್ವಯವಾಗಲಿದೆ. ಹಿಂಬಾಕಿಯನ್ನು ನಗದು ರೂಪದಲ್ಲಿ ನೀಡುವಂತೆ ಶುಕ್ರವಾರ ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.