ADVERTISEMENT

ಭಿಕ್ಷಾಟನೆಗೆ ಮುಂದಾಗಿದ್ದ ನೌಕರರು ವಶಕ್ಕೆ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2023, 22:15 IST
Last Updated 21 ಫೆಬ್ರುವರಿ 2023, 22:15 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ‘ಪಿಂಚಣಿ ಸೌಲಭ್ಯ ಕಲ್ಪಿಸಬೇಕು’ ಎಂದು ಒತ್ತಾಯಿಸಿ ಸ್ವಾತಂತ್ರ್ಯ ಉದ್ಯಾನದಲ್ಲಿ ಭಿಕ್ಷಾಟನೆ ಮಾಡಲು ಮುಂದಾಗಿದ್ದ ಅನುದಾನಿತ ಶಾಲಾ- ಕಾಲೇಜುಗಳ 50 ನೌಕರರನ್ನು ಪೊಲೀಸರು ಮಂಗಳವಾರ ವಶಕ್ಕೆ ಪಡೆದು, ಕೆಲ ಹೊತ್ತಿನ ನಂತರ ಬಿಡುಗಡೆ ಮಾಡಿದರು.

ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದ ನೇತೃತ್ವದಲ್ಲಿ 138 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ನೌಕರರು, ಸೋಮವಾರದಿಂದ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಮಂಗಳವಾರ ಭಿಕ್ಷಾಟನೆ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲು ಸಜ್ಜಾಗಿದ್ದರು.

‘ಭಿಕ್ಷಾಟನೆಗೆ ಅವಕಾಶವಿಲ್ಲ’ ಎಂದು ಹೇಳಿದ ಪೊಲೀಸರು, ಪ್ರತಿಭಟನಾನಿರತ 50 ನೌಕರರನ್ನು ವಶಕ್ಕೆ ಪಡೆದು ಬಿಎಂಟಿಸಿ ಬಸ್‌ಗಳಲ್ಲಿ ಪೊಲೀಸ್ ಪಡೆ ಮೈದಾನಕ್ಕೆ ಕರೆದೊಯ್ದಿದ್ದರು. ನೌಕರರಿಂದ ಮುಚ್ಚಳಿಕೆ ಬರೆಸಿಕೊಂಡು ರಾತ್ರಿ ಬಿಡುಗಡೆ ಮಾಡಿದರು.

ADVERTISEMENT

‘ಪೊಲೀಸರ ಮೂಲಕ ಪ್ರತಿಭಟನೆ ಹತ್ತಿಕ್ಕಲು ಸರ್ಕಾರ ಯತ್ನಿಸುತ್ತಿದೆ. ಇದಕ್ಕೆಲ್ಲ ನಾವು ಹೆದರುವುದಿಲ್ಲ. ಪಿಂಚಣಿ ಸಿಗುವವರೆಗೂ ಹೋರಾಟ ಮುಂದುವರಿಯಲಿದೆ’ ಎಂದು ಪ್ರತಿಭಟನಾಕಾರರು ಹೇಳಿದರು.

ಇಬ್ಬರು ಅಸ್ವಸ್ಥ: ಉಪವಾಸ ನಿರತ ಇಬ್ಬರು ನೌಕರರು ಮಂಗಳವಾರ ಅಸ್ವಸ್ಥಗೊಂಡರು. ಅವರಿಗೆ ವೈದ್ಯರು ಚಿಕಿತ್ಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.