ADVERTISEMENT

‘ಲವ್‌ ಜಿಹಾದ್‌’ ತನಿಖೆಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 4 ಜುಲೈ 2018, 19:24 IST
Last Updated 4 ಜುಲೈ 2018, 19:24 IST

ಬೆಂಗಳೂರು: ರಾಜ್ಯದಲ್ಲಿ ನಡೆದಿರುವ ‘ಲವ್‌ ಜಿಹಾದ್‌’ ಪ್ರಕರಣಗಳ ಬಗ್ಗೆ ತನಿಖೆ ನಡೆಸಬೇಕು ಎಂದು ಬಿಜೆಪಿ ಸದಸ್ಯೆ ತೇಜಸ್ವಿನಿಗೌಡ ಒತ್ತಾಯಿಸಿದರು.

ವಿಧಾನಪರಿಷತ್ತಿನಲ್ಲಿ ಸರ್ಕಾರದ ಗಮನ ಸೆಳೆದ ಅವರು, ‘ಗುಜರಾತ್‌ನ ಹಿಂದು ಯುವತಿಯನ್ನು ಮೋಸದಿಂದ ಮದುವೆಯಾದ ಕೇರಳದ ಮುಸ್ಲಿಂ ಯುವಕ ನಜೀರ್‌, ಆಕೆಯನ್ನು ಮತಾಂತರ ಮಾಡಿ ಅತ್ಯಾಚಾರ ನಡೆಸಿದ. ಬಳಿಕ ಆಕೆಯನ್ನು ಅರಬ್‌ ಶೇಖ್‌ಗಳಿಗೆ ಮಾರುವ ಸಂಚು ಮಾಡಿದ್ದ. ಈತನಿಗೆ ರಾಜ್ಯದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿ ಇರ್ಫಾನ್‌ ಖಾನ್‌ ಮತ್ತು ಅವರ ಪತ್ನಿ ಸಹಕಾರ ನೀಡಿದ್ದಾರೆ. ಈ ಬಗ್ಗೆ ರಾಷ್ಟ್ರೀಯ ತನಿಖಾ ದಳ ವಿಚಾರಣೆ ನಡೆಸಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT