ADVERTISEMENT

ಸಿದ್ದರಾಮಯ್ಯ ನನ್ನ ಗುರು ಎಂದಿದ್ದ ರಮೇಶ್‌ ಜಾರಕಿಹೊಳಿ ಬಗ್ಗೆ ಈಶ್ವರಪ್ಪ ಅಸಮಾಧಾನ

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2019, 14:15 IST
Last Updated 17 ಡಿಸೆಂಬರ್ 2019, 14:15 IST
   

ಶಿವಮೊಗ್ಗ:ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಕಾಣಲು ಆಸ್ಪತ್ರೆಗೆ ಭೇಟಿ ನೀಡಿದ್ದ ವೇಳೆ ‘ಸಿದ್ದರಾಮಯ್ಯ ನನ್ನ ಗುರು’ ಎಂದುಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ನೀಡಿದ್ದ ಹೇಳಿಕೆಗೆ ಸಚಿವ ಕೆ.ಎಸ್.ಈಶ್ವರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ರಮೇಶ್ ಅವರ ಹೇಳಿಕೆ ಬಿಜೆಪಿ ತತ್ವ, ಸಿದ್ಧಾಂತಗಳಿಗೆ ವಿರುದ್ಧವಾಗಿದೆ. ಸಿದ್ದರಾಮಯ್ಯ ಎಂದಿಗೂ ನಮ್ಮ ನಾಯಕ ಅಲ್ಲ. ಬಿಜೆಪಿಗೆ ಸೇರ್ಪಡೆಯಾದ ನಂತರ ಈ ಸತ್ಯವನ್ನು ರಮೇಶ್‌ ತಿಳಿಯಬೇಕಿತ್ತು. ನಮ್ಮದು ಬಿಜೆಪಿ ಪಕ್ಷ. ಪ್ರಧಾನಿ ನರೇಂದ್ರ ಮೋದಿಯೇ ನಮ್ಮ ನಾಯಕ,’ ಎಂದು ಈಶ್ವರಪ್ಪ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT