ADVERTISEMENT

ಶಾಂತಿ ಕದಡುವ ಕೆಲಸ ದುರದೃಷ್ಟಕರ: ಹುಬ್ಬಳ್ಳಿ ಘಟನೆ ಬಗ್ಗೆ ಬಿಎಸ್‌ವೈ ಪ್ರತಿಕ್ರಿಯೆ

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2022, 11:41 IST
Last Updated 17 ಏಪ್ರಿಲ್ 2022, 11:41 IST
ಬಿ.ಎಸ್‌ ಯಡಿಯೂರಪ್ಪ
ಬಿ.ಎಸ್‌ ಯಡಿಯೂರಪ್ಪ    

ಹೊಸಪೇಟೆ (ವಿಜಯನಗರ): ‘ಹುಬ್ಬಳ್ಳಿಯಲ್ಲಿ ಶಾಂತಿ ಕದಡುವ ಕೆಲಸ ನಡೆದಿರುವುದು ದುರದೃಷ್ಟಕರ’ ಎಂದು ಶಾಸಕ, ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಪ್ರತಿಕ್ರಿಯಿಸಿದರು.

ಪ್ರಕರಣದಲ್ಲಿ ಆರೋಪಿಗಳು ಯಾರೇ ಇರಲಿ ತನಿಖೆ ಮಾಡಿ ಬಂಧಿಸಬೇಕು. ಕೋಮುವಾದ ನಿಯಂತ್ರಿಸುವ ಕೆಲಸ ಪೊಲೀಸರು ಮಾಡಬೇಕು. ಶಾಂತಿ- ಸುವ್ಯವಸ್ಥೆ ತರುವ ಕೆಲಸವನ್ನು ನಮ್ಮ ಸರ್ಕಾರ ಖಂಡಿತವಾಗಿ ಮಾಡಲಿದೆ ಎಂದು ಭಾನುವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಈ ಹಿಂದೆ ನೀವು ಮುಖ್ಯಮಂತ್ರಿಗಳಿದ್ದಾಗ ಈ ತರಹದ ಸಮಸ್ಯೆಗಳಾಗುತ್ತಿರಲಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಆ ತರಹ ಏನಿಲ್ಲ. ಈಗಿನ ಸಿಎಂ ಕೂಡ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.