ADVERTISEMENT

ಮಾಜಿ ಮೇಯರ್ ಶಾರದಮ್ಮ ಜೆಡಿಎಸ್‌ಗೆ

​ಪ್ರಜಾವಾಣಿ ವಾರ್ತೆ
Published 5 ಮೇ 2022, 18:39 IST
Last Updated 5 ಮೇ 2022, 18:39 IST
ಶಾರದಮ್ಮ ಅವರನ್ನು ಎಚ್‌.ಡಿ.ಕುಮಾರಸ್ವಾಮಿ ಪಕ್ಷಕ್ಕೆ ಬರಮಾಡಿಕೊಂಡರು. ಶಾಸಕ ಆರ್.ಮಂಜುನಾಥ್‌ ಇದ್ದಾರೆ
ಶಾರದಮ್ಮ ಅವರನ್ನು ಎಚ್‌.ಡಿ.ಕುಮಾರಸ್ವಾಮಿ ಪಕ್ಷಕ್ಕೆ ಬರಮಾಡಿಕೊಂಡರು. ಶಾಸಕ ಆರ್.ಮಂಜುನಾಥ್‌ ಇದ್ದಾರೆ   

ಬೆಂಗಳೂರು: ಮಾಜಿ ಮೇಯರ್ ಶಾರದಮ್ಮ, ಮಾಜಿ ಉಪಮೇಯರ್‌ ಪದ್ಮಾವತಿ ನರಸಿಂಹಮೂರ್ತಿ, ನಗರಸಭೆಯ ಮಾಜಿ ಸದಸ್ಯ ರಾಮಾಂಜಿನಪ್ಪ, ಚಿಕ್ಕಬಾಣಾವಾರ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹನುಮಂತಪ್ಪ ಸೇರಿದಂತೆ ಹಲವು ಮುಖಂಡರು ಜೆಡಿಎಸ್‌ಗೆ ಸೇರಿದರು.

ನಗರದ ಜೆಡಿಎಸ್‌ ಕಚೇರಿಯಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅವರು ಮುಖಂಡರನ್ನು ಬರಮಾಡಿಕೊಂಡರು.

ಕುಮಾರಸ್ವಾಮಿ ಮಾತನಾಡಿ, ‘ದಾಸರಹಳ್ಳಿ ಕ್ಷೇತ್ರದಲ್ಲಿ ಜೆಡಿಎಸ್‌ಗೆ ಒಳ್ಳೆಯ ನೆಲೆ ಇದೆ. ಮುಂದಿನ ಚುನಾವಣೆಯಲ್ಲಿ ಸಹ ಪಕ್ಷವು ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದೆ. ಪಕ್ಷಕ್ಕೆ ಸೇರ್ಪಡೆಯಾದ ಮುಖಂಡರಿಗೆ ಸೂಕ್ತ ಸ್ಥಾನಮಾನ ನೀಡಲಾಗುವುದು’ ಎಂದು ಭರವಸೆ ನೀಡಿದರು. ಶಾಸಕ ಆರ್‌.ಮಂಜುನಾಥ್‌ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.