ADVERTISEMENT

'ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ'–ನಾಗೇಶ್‌

​ಪ್ರಜಾವಾಣಿ ವಾರ್ತೆ
Published 13 ಜನವರಿ 2021, 9:00 IST
Last Updated 13 ಜನವರಿ 2021, 9:00 IST
2019ರ ಆಗಸ್ಟ್‌ 20ರಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಎಚ್‌.ನಾಗೇಶ್‌
2019ರ ಆಗಸ್ಟ್‌ 20ರಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಎಚ್‌.ನಾಗೇಶ್‌   

ಬೆಂಗಳೂರು: ಸಚಿವ ಸ್ಥಾನದ ಹುದ್ದೆಗೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ ಎಂದು ಅಬಕಾರಿ ಸಚಿವ ಎಚ್‌.ನಾಗೇಶ್‌ ಹೇಳಿದರು.

ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜೀನಾಮೆ ನೀಡಲು ಸೂಚಿಸಿದರು. ಸಭೆಯಲ್ಲಿ ಇದಕ್ಕೆ ವಿರೋಧ ವ್ಯಕ್ತಪಡಿಸಿದರೂ, ಯಡಿಯೂರಪ್ಪ ಅದನ್ನು ಕೇಳಲು ತಯಾರಿರಲಿಲ್ಲ.

ಸಚಿವ ಸಂಪುಟ ಸಭೆಯ ಬಳಿಕ ಸಚಿವರಾದ ಎಸ್‌.ಟಿ.ಸೋಮಶೇಖರ್‌, ಡಾ.ಕೆ. ಸುಧಾಕರ್‌. ನಾರಾಯಣಗೌಡ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ರಾಜೀನಾಮೆ ಕೇಳಿರುವುದು ಸರಿಯಲ್ಲ ಎಂದು ವಿರೋಧ ವ್ಯಕ್ತಪಡಿಸಿದರು.

ADVERTISEMENT

ಬಳಿಕ ಯಡಿಯೂರಪ್ಪ ಅವರು ರಾಜೀನಾಮೆ ನೀಡಿದರೆ, ಅದಕ್ಕೆ ಸಮಾನಾಂತರ ಹುದ್ದೆಯನ್ನು ನೀಡುವುದಾಗಿ ಭರವಸೆ ನೀಡಿದರು. ಬಳಿಕ ಅದಕ್ಕೆ ನಾಗೇಶ್‌ ಒಪ್ಪಿಗೆ ನೀಡಿದರು ಎಂದು ಮೂಲಗಳಿಂದ ತಿಳಿದು ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.