ADVERTISEMENT

ಬಿಜೆಪಿ ರಾಜ್ಯ ಕಾರ್ಯಕಾರಿಣಿ: ಜಿಂದಾಲ್ ವಾಯುನೆಲೆಗೆ ಬಂದ ನಡ್ಡಾಗೆ ಸಿ‌ಎಂ ಸ್ವಾಗತ

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2022, 8:51 IST
Last Updated 17 ಏಪ್ರಿಲ್ 2022, 8:51 IST
   

ಹೊಸಪೇಟೆ (ವಿಜಯನಗರ): ಬಿಜೆಪಿ ರಾಜ್ಯ ಕಾರ್ಯಕಾರಿಣಿಯಲ್ಲಿ ಪಾಲ್ಗೊಳ್ಳಲು ಜಿಂದಾಲ್ ವಾಯುನೆಲೆಗೆ ಬಂದಿಳಿದ ಪಕ್ಷದ ರಾಷ್ಟ್ರೀಯ ಅಧ್ತಕ್ಷ ಜೆ.ಪಿ. ನಡ್ಡಾ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬರಮಾಡಿಕೊಂಡರು.

ಸಚಿವರಾದ ಬಿ.ಶ್ರೀರಾಮುಲು, ಆನಂದ್ ಸಿಂಗ್ ಜತೆಗಿದ್ದರು.

ಸಾಂಪ್ರದಾಯಿಕ ಸ್ವಾಗತ
ಬಿಜೆಪಿ ರಾಜ್ಯ ಕಾರ್ಯಕಾರಿಣಿಯಲ್ಲಿ ಪಾಲ್ಗೊಳ್ಳಲು ಬಂದ ನಡ್ಡಾ ಅವರಿಗೆಕಂಸಾಳೆ, ಡೊಳ್ಳು ಕುಣಿತದ ತಂಡಗಳ ನಾದ, ಜಯಘೋಷಗಳ ನಡುವೆ ಸಾಂಪ್ರದಾಯಿಕ ಸ್ವಾಗತ ಕೋರಲಾಯಿತು.

ADVERTISEMENT

ಸಭೆಯಲ್ಲಿ ಭಾಗವಹಿಸುವುದಕ್ಕೂ ಮುನ್ನ ಗೋವಿಗೆ ಪೂಜೆ ನೆರವೇರಿಸಿ ಬೆಲ್ಲ ತಿನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.