ADVERTISEMENT

ಆಗ್ನೇಯ ಪದವೀಧರ ಕ್ಷೇತ್ರ: ಶ್ರೀನಿವಾಸ್‌ ಉಚ್ಚಾಟನೆ

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2020, 17:30 IST
Last Updated 23 ಅಕ್ಟೋಬರ್ 2020, 17:30 IST

ಬೆಂಗಳೂರು: ವಿಧಾನಪರಿಷತ್ತಿನ ಆಗ್ನೇಯ ಪದವೀಧರ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಡಿ.ಟಿ.ಶ್ರೀನಿವಾಸ್‌ ಅವರನ್ನು ಬಿಜೆಪಿ ಉಚ್ಚಾಟಿಸಿದೆ. ಇವರು ಹಿರಿಯೂರು ಕ್ಷೇತ್ರದ ಬಿಜೆಪಿಯ ಶಾಸಕಿ ಪೂರ್ಣಿಮಾ ಅವರ ಪತಿ.

‘ಕಣದಿಂದ ಹಿಂದಕ್ಕೆ ಸರಿಯುವಂತೆ ಶ್ರೀನಿವಾಸ್ ಅವರಿಗೆ ಸೂಚಿಸಲಾಗಿತ್ತು. ಪಕ್ಷದ ಸೂಚನೆಯನ್ನು ಕಡೆಗಣಿಸಿ ಪಕ್ಷಕ್ಕೆ ಮುಜುಗರ ಉಂಟುಮಾಡಿರುವುದರಿಂದ ಅವರನ್ನು ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಲಾಗಿದೆ’ ಎಂದು ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ತಿಳಿಸಿದ್ದಾರೆ.

ಶಿರಾ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್‌ಗಾಗಿ ಪ್ರಯತ್ನ ನಡೆಸಿದ್ದರು. ಅಂತಿಮವಾಗಿ ಆಗ್ನೇಯ ಕ್ಷೇತ್ರದಿಂದ ಶ್ರೀನಿವಾಸ್‌ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.