ಬಾಗಲಕೋಟೆ: ಸಾಲಬಾಧೆಯಿಂದ ಬೇಸತ್ತು ಜಮಖಂಡಿ ತಾಲ್ಲೂಕಿನ ಚಿಕ್ಕಪಡಸಲಗಿಯ ರೈತ ಪಾಂಡಪ್ಪ ಅಂಬಿ(55) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಮೀನಿನಲ್ಲಿ ಬೇವಿನ ಮರಕ್ಕೆ ನೇಣು ಹಾಕಿಕೊಂಡಿದ್ದಾರೆ.
ಬ್ಯಾಂಕು, ಪಿಕೆಪಿಎಸ್, ಕೈಗಡ ಸೇರಿದಂತೆ ವಿವಿಧೆಡೆ ₹9 ಲಕ್ಷ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ.
ಕಬ್ಬು ಬೆಳೆಗೆ ನೀರು ಹಾಯಿಸಲೆಂದು ಗದ್ದೆಗೆ ತೆರಳಿದ್ದ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಬಗ್ಗೆಸಾವಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.