ADVERTISEMENT

ಇಬ್ಬರು ರೈತರ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 20 ಮೇ 2020, 22:07 IST
Last Updated 20 ಮೇ 2020, 22:07 IST
ಶಿವಕುಮಾರ
ಶಿವಕುಮಾರ   

ಬೆಂಗಳೂರು: ರಾಜ್ಯದಲ್ಲಿ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಹುಣಸೂರು ತಾಲ್ಲೂಕಿನ ಧರ್ಮಾಪುರ ಗ್ರಾಮದ ರೈತ ಶಿವಕುಮಾರ (48), ವಿಷ ಸೇವಿಸಿ ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಖಾಸಗಿಯಾಗಿ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಲಾಕ್‌ಡೌನ್‌ನಿಂದಾಗಿ ಯಾವುದೇ ವಹಿವಾಟು ನಡೆಯದೇ ಕುಟುಂಬ ನಿರ್ವಹಣೆಯೂ ಕಷ್ಟವಾಗಿತ್ತು ಎಂದು ಕುಟುಂಬದವರು ತಿಳಿಸಿದ್ದಾರೆ.

ದಾವಣಗೆರೆ ತಾಲ್ಲೂಕಿನ ಶಿರಮಗೊಂಡನಹಳ್ಳಿಯ ರೈತ ಎ.ಎಚ್.ಉಮೇಶ್ (50) ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇವರಿಗೆ 15 ಎಕರೆ ಜಮೀನಿತ್ತು. ಈ ಜಮೀನಿನಲ್ಲಿ ಭತ್ತ, ಅಡಿಕೆ ತೋಟ ಇದ್ದು, ಬೆಳೆಗೆ ಬೆಲೆ ಸಿಗದೇ ನಷ್ಟ ಅನುಭವಿಸಿದ್ದರು. ಬ್ಯಾಂಕಿನಿಂದ ಸಾಲ ಸಹ ಮಾಡಿಕೊಂಡಿದ್ದರು ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.