ADVERTISEMENT

ರೈತರ ಸಭೆ ಕರೆದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2020, 9:00 IST
Last Updated 25 ಸೆಪ್ಟೆಂಬರ್ 2020, 9:00 IST
ಮುಖ್ಯಮಂತ್ರಿ ಬಿ.ಎಸ್‌.ಯಡಿಯುರಪ್ಪ
ಮುಖ್ಯಮಂತ್ರಿ ಬಿ.ಎಸ್‌.ಯಡಿಯುರಪ್ಪ   

ಬೆಂಗಳೂರು: 'ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಧ್ಯಾಹ್ನ 3ಕ್ಕೆ ರೈತರ ಸಭೆ ಕರೆದಿದ್ದಾರೆ. ಕಾಯ್ದೆಗಳ ತಿದ್ದುಪಡಿಗಳಿಂದಾಗಿ ರೈತರಿಗೆ, ಕಾರ್ಮಿಕರಿಗೆ ಆಗುವ ಅನ್ಯಾಯದ ಕುರಿತು ಅವರ ಗಮನಕ್ಕೆ ತರಲಾಗುವುದು‌. ಸುಗ್ರೀವಾಜ್ಞೆ ವಾಪಸ್ ಗೆ ಒತ್ತಾಯಿಸಲಾಗುವುದು' ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.

ಬೆಂಗಳೂರಿನ ಮೈಸೂರು ಬ್ಯಾ‌ಂಕ್ ವೃತ್ತದಲ್ಲಿ ರೈತರು, ಕಾರ್ಮಿಕರು ಮತ್ತು ದಲಿತ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು.ಸುಗ್ರೀವಾಜ್ಞೆ- ಮಸೂದೆಗಳ ವಾಪಸ್ಗೆ ಒತ್ತಾಯ ಮಾಡಿದರು.ಕೇಂದ್ರ- ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಘೋಷಣೆ ಕೂಗಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT