ADVERTISEMENT

ಅಪಪ್ರಚಾರಕ್ಕೆ ಕಿವಿಗೊಟ್ಟು ರೈತರು ಫಸಲು ನಾಶ ಮಾಡಬೇಡಿ: ಸಚಿವ ಬಿ‌.ಸಿ.ಪಾಟೀಲ್

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2020, 13:46 IST
Last Updated 1 ಏಪ್ರಿಲ್ 2020, 13:46 IST
   

ಬೆಂಗಳೂರು: ರೈತರು ತಮ್ಮ ಬೆಳೆಗಳನ್ನು ರಸ್ತೆಗೆ ಚೆಲ್ಲುವುದಾಗಲೀ, ನಾಶ ಮಾಡುವುದಾಗಲೀ ಮಾಡಬಾರದು. ಕೊರೊನಾ ರೋಗ ಜಗತ್ತಿಗೆ ಎದುರಾದ ಸಮಸ್ಯೆ. ಇದನ್ನು ಯಾರೂ ನಿರೀಕ್ಷಿಸಿರಲಿಲ್ಲ. ಹೀಗಾಗಿ ರೈತರು ಆತುರಕ್ಕೊಳಗಾಗದೆ ಸ್ವಲ್ಪ ತಾಳ್ಮೆ ವಹಿಸಿ ಇಲಾಖೆ ನೀಡಿದ ಕ್ರಮ ಅನುಸರಿಸಿ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ರೈತರಿಗೆ ಮನವಿ ಮಾಡಿದ್ದಾರೆ.

ರಾಯಚೂರು ಸೇರಿದಂತೆ ಬೇರೆ ಯಾವುದೇ ಭಾಗದಲ್ಲಿ ರೈತರ ಬೆಳೆ ಸಮೀಕ್ಷೆಯಾಗದೇ ಇದ್ದದ್ದು ಕಂಡುಬಂದಲ್ಲಿ ತಕ್ಷಣವೇ ಸಮೀಕ್ಷೆ ಕೈಗೊಳ್ಳಬೇಕು ಎಂದು ಕೃಷಿ ಅಧಿಕಾರಿಗಳಿಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಸೂಚನೆ ನೀಡಿದರು.,ಫಸಲು ಸಮೀಕ್ಷೆ ನಡೆಸಿ ಫಸಲ್ ಭೀಮಾಗೆ ಒಳಪಡಿಸಬೇಕು ಎಂದಿದ್ದಾರೆ.

ರಾಯಚೂರು ಕೊಪ್ಪಳ ಮೈಸೂರಿನ ಕೆಲ ಭಾಗ ಸೇರಿದಂತೆ ಹಲವೆಡೆ ಭತ್ತ ಕಟಾವು ಯಂತ್ರೋಪಕರಣಕ್ಕೆ ಗಡಿಯಲ್ಲಿ ನಿಲ್ಲಿಸಬಾರದು. ರೈತರಿಗೆ ಬೇಕಾದ ಬೀಜ, ಗೊಬ್ಬರ ಔಷಧಿ ಮಾರಾಟಕ್ಕೆಮುಕ್ತ ಅವಕಾಶ ಪೈಪ್ ಅಂಗಡಿಗಳನ್ನು ‌ತೆರೆಯಲು ಮಾರಾಟ ಮಾಡಲು ಯಾವುದೇ ಅಡೆತಡೆಯಿಲ್ಲ. ಮುಂಗಾರು ಬಿತ್ತನೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ‌‌. ಎಲ್ಲಾ ದಿನಸಿ ತರಕಾರಿ ಅಂಗಡಿ ತೆರೆದಿವೆ. ರೈತರ ಜೀವ ಕುಟುಂಬದ ಹೊಣೆ ಅವರ ಮೇಲೆ ಇರುವುದರಿಂದ ರೈತರು ಮುಗಿಬೀಳದೇ ಆರೋಗ್ಯದ ಮೇಲೆ ಕಾಳಜಿ ಹೊಂದಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಲೇಬೇಕು ಎಂದು ಸ್ಪಷ್ಟಪಡಿಸಿದರು.

ADVERTISEMENT

ರೈಲ್ವೆ ಗೂಡ್ಸ್ ಮೂಲಕ ಸಾಗಾಣಿಕೆ ಮಾಡಬಹುದು. ಹಣ್ಣುಗಳನ್ನು ತಿನ್ನುವುದರಿಂದ ಖಾಯಿಲೆ ಬರುವುದಿಲ್ಲ. ಕಲ್ಲಂಗಡಿ ಹಣ್ಣಾಗಲೀ, ಅನಾನಸ್ ಆಗಲಿ ತಿಂದರೆ ಕೊರೊನಾ ಬರುವುದಿಲ್ಲ. ತಪ್ಪು ಮಾಹಿತಿ ಅಪಪ್ರಚಾರಕ್ಕೆ ಬೆಲೆಕೊಡಬಾರದು. ನಿಂಬೆಹಣ್ಣು ತಿನ್ನುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚಿದೆ. ಕಲ್ಲಂಗಡಿ ಅನಾನಸ್ ನಿಂಬೆಹಣ್ದು ಉಪಯೋಗಿಸುವುದು ಆರೋಗ್ಯಕ್ಕೆ ಒಳ್ಳೆಯದು. ಹಾಗಾಗಿ ಜನರು ಹೆಚ್ಚೆಚ್ಚು ಹಣ್ಣು ಬಳಸಿ ಎಂದು ಮಾಹಿತಿ ನೀಡಿದರು.

ಆತುರಕ್ಕೆ ಒಳಪಟ್ಟಾಗಲಿ ಅಥವಾ ಅಪಪ್ರಚಾರಕ್ಕಾಗಲಿ ರೈತರು ಕಿವಿಕೊಡಬಾರದು. ಯಾರೂ ಆತುರಕ್ಕೆ ಬುದ್ಧಿಕೊಟ್ಟು ಬೆಳೆಗಳನ್ನು ನಾಶ ಮಾಡುವುದಾಗಲಿ ರಸ್ತೆಗೆ ಸುರಿಯುವುದಾಗಲೀ ಮಾಡಬಾರದು. ಶಿಥಲೀಕರಣ ಘಟಕ ಎಪಿಎಂಸಿ ವ್ಯವಸ್ಥೆ ಬಳಸಿಕೊಳ್ಳಬೇಕು ಎಂದು ಕೃಷಿ ಸಚಿವರು ಸ್ಪಷ್ಟ‌ಮಾಹಿತಿ ನೀಡಿದರು.

ಪೊಲೀಸರಾಗಲೀ ಬೇರೆ ಯಾರೇ ಆಗಲೀ ಗ್ರೀನ್ ಪಾಸ್ ಹೊಂದಿದ ರೈತರ ಪರಿಕರ ಫಸಲು ಮಾರಾಟ ಸಾಗಾಣಿಕೆಗೆ ತಡೆ ಮಾಡುವಂತಿಲ್ಲ ಎಂದು ಸಚಿವರು ಪುನರುಚ್ಚರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.