ADVERTISEMENT

ಟಿಕಾಯತ್‌ ವಿರುದ್ಧದ ಪ್ರಕರಣ ಹಿಂಪಡೆಯಿರಿ: ರೈತ ಮುಖಂಡರ ಆಗ್ರಹ

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2021, 3:55 IST
Last Updated 25 ಮಾರ್ಚ್ 2021, 3:55 IST
ರಾಕೇಶ್ ಟಿಕಾಯತ್‌
ರಾಕೇಶ್ ಟಿಕಾಯತ್‌   

ಬೆಂಗಳೂರು: ರಾಕೇಶ್ ಟಿಕಾಯತ್‌ ಅವರ ವಿರುದ್ಧ ರಾಜ್ಯದ ವಿವಿಧೆಡೆ ದಾಖಲಿಸಿರುವ ಪ್ರಕರಣಗಳನ್ನು ತಕ್ಷಣ ಹಿಂಪಡೆಯುವಂತೆ ರೈತ ಸಂಘಟನೆಗಳ ಮುಖಂಡರು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದ್ದಾರೆ.

ಗೃಹ ಸಚಿವರಿಗೆ ಬುಧವಾರ ಬಹಿರಂಗ ಪತ್ರ ಬರೆದಿರುವ ರೈತ ಮುಖಂಡರಾದ ಚುಕ್ಕಿ ನಂಜುಂಡಸ್ವಾಮಿ, ಕೆ.ಟಿ. ಗಂಗಾಧರ್, ಎಚ್‌.ಆರ್‌. ಬಸವರಾಜಪ್ಪ, ವೀರಸಂಗಯ್ಯ, ಚಾಮರಸ ಮಾಲಿಪಾಟೀಲ, ಕುರುಬೂರು ಶಾಂತಕುಮಾರ್‌, ಬಡಗಲಪುರ ನಾಗೇಂದ್ರ ಮತ್ತು ಕೋಡಿಹಳ್ಳಿ ಚಂದ್ರಶೇಖರ್‌ ಅವರು ಈ ಕುರಿತು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.