ADVERTISEMENT

‘ಸಾಲ ಮನ್ನಾ: ಶೀಘ್ರವೇ ಆದೇಶ’

​ಪ್ರಜಾವಾಣಿ ವಾರ್ತೆ
Published 19 ಜುಲೈ 2018, 18:59 IST
Last Updated 19 ಜುಲೈ 2018, 18:59 IST

ಬೆಂಗಳೂರು: ಸಾಲ ಮನ್ನಾ ಮಾಡುವುದಾಗಿ ಬಜೆಟ್‌ನಲ್ಲಿ ಘೋಷಿಸಿದ್ದರೂ, ಈ ಬಗ್ಗೆ ಸರ್ಕಾರ ಯಾವುದೇ ಆದೇಶ ಹೊರಡಿಸದಿರುವುದು ರೈತ ಸಮುದಾಯದಲ್ಲಿ ಕಳವಳ ಉಂಟು ಮಾಡಿದೆ.

ಮಾಧ್ಯಮ ಪ್ರತಿನಿಧಿಗಳ ಜೊತೆ ಗುರುವಾರ ಮಾತನಾಡಿದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ‘ರೈತರು ಆತಂಕಪಡುವ ಅಗತ್ಯ ಇಲ್ಲ. ರಾಷ್ಟ್ರೀಕೃತ ಬ್ಯಾಂಕ್‌ಗಳ ಜತೆ ಒಂದೆರಡು ದಿನಗಳಲ್ಲಿ ಒಡಂಬಡಿಕೆ ಪ್ರಕ್ರಿಯೆ ನಡೆಯಲಿದೆ. ಬಳಿಕ, ಈ ಬಗ್ಗೆ ಆದೇಶ ಹೊರಬೀಳಲಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT